Thursday, September 19, 2024
Google search engine
Homeತಾಜಾ ಸುದ್ದಿವಯನಾಡು ದುರಂತದಲ್ಲಿ ಚಾಮರಾಜನಗರದ 4 ಮಂದಿ ಸೇರಿ 6 ಕನ್ನಡಿಗರು ಸಾವು

ವಯನಾಡು ದುರಂತದಲ್ಲಿ ಚಾಮರಾಜನಗರದ 4 ಮಂದಿ ಸೇರಿ 6 ಕನ್ನಡಿಗರು ಸಾವು

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಚಾಮರಾಜನಗರದ 4 ಮಂದಿ ಸೇರಿದಂತೆ ಒಟ್ಟಾರೆ  6 ಕನ್ನಡಿಗರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಚಾಮರಾಜನಗರ ಜಿಲ್ಲಾಡಳಿತ ಬುಧವಾರ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಚಾಮರಾಜನಗರ ಜಿಲ್ಲೆಯ ನಿವಾಸಿಗಳಾದ ರಾಜೇಂದ್ರ (50), ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ (62) ಮತ್ತು ರಾಣಿ (50) ಸೇರಿ ರಾಜ್ಯದ 6 ಮಂದಿ ಮೃತಪಟ್ಟಿದ್ದಾರೆ.

ಪುಟ್ಟಸಿದ್ದಶೆಟ್ಟಿ ಮತ್ತು ರಾಣಿ ಅವರ ಶವವನ್ನು ರಕ್ಷಣಾ ತಂಡ ಹೊರಗೆ ತೆಗೆದಿದ್ದು, ಉಳಿದವರ ಶೋಧ ಕಾರ್ಯ ನಡೆದಿದೆ. ಮೃತರು ಉದ್ಯೋಗ ಅರಸಿ ವಯನಾಡುನಲ್ಲಿ ನೆಲೆಸಿದ್ದರು ಎಂದು ತಿಳಿದು ಬಂದಿದೆ.

ಕೇರಳದ ವಯಾನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತ ದುರ್ಘಟನೆಯಲ್ಲಿ ಈವರೆಗೆ 151 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ.

ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದು, ವಯನಾಡಿನಲ್ಲಿ ತೊಂದರೆಗೆ ಸಿಲುಕಿದವರ ರಕ್ಷಣೆಗೆ ಇಬ್ಬರು ಐಎಎಸ್ ಅಧಿಕಾರಿಗಳು ಹಾಗೂ ಸಚಿವ ಸಂತೋಷ್ ಲಾಡ್ ಅವರನ್ನು ಕಳುಹಿಸಿಕೊಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments