Sunday, September 22, 2024
Google search engine
Homeಅಪರಾಧಜಾತ್ರೆಗಾಗಿ ಊರಿಗೆ ಬಂದಿದ್ದ ಉದ್ಯಮಿಯ ಭೀಕರ ಹತ್ಯೆ, ಪತ್ನಿಗೂ ಗಾಯ!

ಜಾತ್ರೆಗಾಗಿ ಊರಿಗೆ ಬಂದಿದ್ದ ಉದ್ಯಮಿಯ ಭೀಕರ ಹತ್ಯೆ, ಪತ್ನಿಗೂ ಗಾಯ!

ಜಾತ್ರೆಗೆಂದು ಕುಟುಂಬದ ಸಮೇತರಾಗಿ ಊರಿಗೆ ಬಂದಿದ್ದ ಉದ್ಯಮಿಯ ಮೇಲೆ ದುಷ್ಕರ್ಮಿಗಳು ಲಾಂಗ್-ಮಚ್ಚುಗಳಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಪುಣೆ ಮೂಲದ ವಿನಾಯಕ ನಾಯ್ಕ (52) ಕೊಲೆಯಾಗಿದ್ದು, ಪತ್ನಿ ಮೇಲೂ ಹಲ್ಲೆ ನಡೆದಿದ್ದು, ತಲೆಗೆ ಗಂಭೀರ ಗಾಯವಾಗಿದೆ.

ಕಾರವಾರದ ಹಣಕೊಡಣ ಗ್ರಾಮದ ಚಿತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿನಾಯಕ್ ಅವರು ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಕಾರವಾರಕ್ಕೆ ಬಂದಿದ್ದರು.

ಭಾನುವಾರ ಬೆಳಗ್ಗೆ ಪುಣೆಗೆ ಮರಳುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಬೆಳಗಿನ ಜಾವ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿರುವುದು ಸಾಕಷ್ಟು ಅನುಮಾನ ಹುಟ್ಟುವಂತೆ ಮಾಡಿದೆ. ಹಣಕಾಸಿನ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments