Home ಅಪರಾಧ ಚಿತ್ರದುರ್ಗದ ಆಶ್ರಮದ ನೀರಿನ ತೊಟ್ಟಿಯಲ್ಲಿ ತಾಯಿ-ಮಗಳ ಶವಪತ್ತೆ! ಗೋಡೆ ಮೇಲೆ ಡೆತ್ ನೋಟ್ ಪತ್ತೆ!

ಚಿತ್ರದುರ್ಗದ ಆಶ್ರಮದ ನೀರಿನ ತೊಟ್ಟಿಯಲ್ಲಿ ತಾಯಿ-ಮಗಳ ಶವಪತ್ತೆ! ಗೋಡೆ ಮೇಲೆ ಡೆತ್ ನೋಟ್ ಪತ್ತೆ!

by Editor
0 comments

ಆಶ್ರಮದ ನೀರಿನ ತೊಟ್ಟಿಯಲ್ಲಿ ತಾಯಿ-ಮಗಳ ಶವಪತ್ತೆಯಾಗಿರುವ ಘಟನೆ ಚಿತ್ರದುರ್ಗದ ತಿಪ್ಪೇರುದ್ರಸ್ವಾಮಿ ‌ಆಶ್ರಮದಲ್ಲಿ ನಡೆದಿದೆ.

ಚಿತ್ರದುರ್ಗದ ತುರುವನೂರು ರಸ್ತೆಯಲ್ಲಿನ ತಿಪ್ಪೇರುದ್ರಸ್ವಾಮಿ ‌ಆಶ್ರಮದಲ್ಲಿ ಪೂಜಾರಿ ಸುರೇಶ್ ಪತ್ನಿ ಗೀತಾ (42) ಹಾಗೂ ಪುತ್ರಿ ಪ್ರಿಯಾಂಕಾ (20) ಅವರ ಮೃತದೇಹಗಳು ಆಶ್ರಮದಲ್ಲಿರುವ ನೀರಿನ ತೊಟ್ಟಿಯಲ್ಲಿ ಮಂಗಳವಾರ) ರಾತ್ರಿ ಪತ್ತೆಯಾಗಿದೆ.

ತಾಯಿ-ಮಗಳು ನೀರಿನ ತೊಟ್ಟಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿತ್ತು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೀತಾ ಸಾವಿಗೆ ಕಾರಣವಾಗಿರಬಹುದು ಎಂದು ಊಹಿಸಲಾಗಿತ್ತು.

ಆದರೆ ಆಶ್ರಮದ ಗೋಡೆ ಮೇಲೆ ತಾಯಿ-ಮಗಳ ಹೆಸರಲ್ಲಿ ಬರೆದಿಟ್ಟಿದ್ದ ಡೆತ್‌ ನೋಟ್‌ ಪತ್ತೆಯಾಗಿದ್ದು, ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಡೆತ್‌ ನೋಟ್‌ ಪರಿಶೀಲಿಸಿದ ಚಿತ್ರದುರ್ಗ ಬಡಾವಣೆ ಠಾಣೆ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ನಡುವೆ ಮೃತ ಗೀತಾಳ ಸಹೋದರ ಠಾಣೆಗೆ ದೂರು ನೀಡಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

banner

ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ‌ಧರ್ಮೇಂದರ್‌ ಕುಮಾರ್‌ ಮೀನಾ, ಪ್ರಕರಣದ ತನಿಖೆ ಚುರುಕುಗೊಳಿಸಿದ್ದೇವೆ. ವಶಪಡಿಸಿಕೊಂಡಿರುವ ವಸ್ತುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಸತ್ಯಾಸತ್ಯತೆ ಬಯಲಾಗಲಿದೆ ಎಂದು ತಿಳಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ! ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟ! ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ, ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ದಲಿತ ಅಥ್ಲೀಟ್ ಮೇಲೆ 65 ಜನರಿಂದ ಅತ್ಯಾಚಾರ: 44 ಮಂದಿ ಬಂಧನ ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ