Home ಅಪರಾಧ ಸಿಗರೇಟು ಸೇದುತ್ತಿದ್ದ ಮಹಿಳೆಯರನ್ನು ದಿಟ್ಟಿಸಿ ನೋಡಿದ್ದಕ್ಕೆ ವ್ಯಕ್ತಿಯ ಹತ್ಯೆ

ಸಿಗರೇಟು ಸೇದುತ್ತಿದ್ದ ಮಹಿಳೆಯರನ್ನು ದಿಟ್ಟಿಸಿ ನೋಡಿದ್ದಕ್ಕೆ ವ್ಯಕ್ತಿಯ ಹತ್ಯೆ

by Editor
0 comments

ಪಾನ್ ಶಾಪ್ ಅಂಗಡಿ ಮುಂದೆ ಸಿಗರೇಟು ಸೇದುತ್ತಿದ್ದ ಇಬ್ಬರು ಮಹಿಳೆಯರನ್ನು ದಿಟ್ಟಿಸಿ ನೋಡಿದ್ದಕ್ಕೆ 28 ವರ್ಷದ ಯುವಕ ಹತ್ಯೆಯಾದ ಭೀಕರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ನಾಗ್ಪುರದ ಮಹಾಲಕ್ಷ್ಮೀ ನಗರದಲ್ಲಿ ಈ ಘಟನೆ ನಡೆದಿದ್ದು, ಜಯಶ್ರೀ ಪಂಜಾಡೆ ಮತ್ತು ಸ್ನೇಹಿತೆ ಸರಿತಾ ಸೈರೆ ಪಾನ್ ಅಂಗಡಿ ಮುಂದೆ ಸಿಗರೇಟು ಸೇದುತ್ತಿದ್ದರು.

ಇದೇ ವೇಳೆ ಸಿಗರೇಟ್ ತೆಗೆದುಕೊಳ್ಳಲು ಅಂಗಡಿಗೆ ಬಂದ ರಂಜತ್ ರಾಥೋಡ್ ಇಬ್ಬರು ಮಹಿಳೆಯರು ಸಿಗರೇಟು ಸೇದುತ್ತಿರುವುದನ್ನು ನೋಡಿ ಅಚ್ಚರಿಯಿಂದ ಅವರನ್ನೇ ದಿಟ್ಟಿಸಿ ನೋಡುತ್ತಿದ್ದ.

ತಮ್ಮನ್ನು ದಿಟ್ಟಿಸಿ ನೋಡುತ್ತಿರುವುದನ್ನು ಗಮನಿಸಿದ ಮಹಿಳೆಯರು ರಂಜಿತ್ ನನ್ನು ಪ್ರಶ್ನಿಸಿದರು. ಇಬ್ಬರು ನಡುವೆ ಮಾತಿಗೆ ಮಾತು ಬೆಳೆದು ಜಗಳಕ್ಕೆ ತಿರುಗಿತು. ಮಹಿಳೆಯರು ನಿಂದಿಸುವುದನ್ನು ರಂಜಿತ್ ವೀಡಿಯೋ ಚಿತ್ರೀಕರಿಸತೊಡಗಿದ.

banner

ಮಹಿಳೆಯರು ಕೂಡಲೇ ಸ್ನೇಹಿತನಿಗೆ ಕರೆ ಮಾಡಿ ಕೂಡಲೇ ಸ್ಥಳಕ್ಕೆ ಬರುವಂತೆ ಹೇಳಿದರು. ಸ್ಥಳಕ್ಕೆ ಆಗಮಿಸಿದ ಆಕಾಶ್ ರೌತ್ ರಂಜಿತ್ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೇ ಚಾಕುವಿನಿಂದ ಪದೇಪದೆ ಇರಿದ. ಇದರಿಂದ ತೀವ್ರ ಅಸ್ವಸ್ಥನಾದ ರಂಜಿತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಂಗಡಿ ಮಾಲೀಕ ಲಕ್ಷ್ಮಣ್ ತಾವಡೆ ಪ್ರತ್ಯಕ್ಷದರ್ಶಿ ಆಗಿದ್ದು, ಮಹಿಳೆ ಕರೆ ಮಾಡಿ ಸ್ನೇಹಿತನನ್ನು ಕರೆ ಮಾಡುತ್ತಿದ್ದಂತೆ ಅಂಗಡಿ ಬಾಗಿಲು ಹಾಕಿ ಹೋಗಿದ್ದಾಗಿ ಹೇಳಿದ್ದಾನೆ. ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು, 16 ಮಂದಿ ಕಣ್ಮರೆ: ಕೇಂದ್ರ ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ 5 ನಿಮಿಷದಲ್ಲಿ 12 ಕೋಟಿ ಚಿನ್ನಾಭರಣ ಲೂಟಿ: ದರೋಡೆಕೋರರ ಮಾಸ್ಟರ್ ಪ್ಲಾನ್! ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ.: ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ! ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದ ಸಿಎಂ 5 ಗಂಟೆ ಶಸ್ತ್ರಚಿಕಿತ್ಸೆ ನಂತರ ಸೈಫ್ ದೇಹದಿಂದ 2.5 ಇಂಚು ಉದ್ದದ ಚಾಕು ಹೊರತೆಗೆದ ವೈದ್ಯರು! ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ ನನ್ನ ಖಾಸಗಿ ವೀಡಿಯೊಗಳನ್ನು ಮರಳಿಸಿ: ಪ್ರಜ್ವಲ್ ರೇವಣ್ಣ ಮನವಿಗೆ ಹೈಕೋರ್ಟ್ ಚಾಟಿ!