Monday, September 16, 2024
Google search engine
Homeಜಿಲ್ಲಾ ಸುದ್ದಿಕುರಿ ಹೊಲಸು ತಿನ್ನಲ್ಲ, ಕುರುಬ ತಪ್ಪು ಮಾಡಲ್ಲ: ಈಶ್ವರಾನಂದಪುರಿ ಸ್ವಾಮೀಜಿ

ಕುರಿ ಹೊಲಸು ತಿನ್ನಲ್ಲ, ಕುರುಬ ತಪ್ಪು ಮಾಡಲ್ಲ: ಈಶ್ವರಾನಂದಪುರಿ ಸ್ವಾಮೀಜಿ

ಕುರಿ ಹೊಲಸು ತಿನ್ನಲ್ಲ, ಕುರುಬ ತಪ್ಪು ಮಾಡಲ್ಲ. ಅದೇ ರೀತಿ ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಎಂದು ಹೊಸದುರ್ಗದ ಕನಕಗುರು ಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ದುರುದ್ದೇಶದಿಂದ ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಒಂದು ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಹುನ್ನಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಗೌರವ. ಅಷ್ಟಕ್ಕೂ ಅಧಿಕಾರದಲ್ಲಿರುವುದು ಹಿಂದುಳಿದ ವರ್ಗದ ಪ್ರಬಲ ಜನನಾಯಕ ಅವರು ದೀನ ದುರ್ಬಲರ ಮಹಿಳೆಯರ ಶೋಷಿತರ ಪರವಾಗಿ ಕೆಲಸ ಮಾಡುತ್ತಿರುವ ನಾಯಕ ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ವರ್ಚಸ್ಸು ಮತ್ತು ಜನಪ್ರಿಯತೆಯನ್ನು ಸಹಿಸಲಾಗದ ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿರುವ ಕುತಂತ್ರ. ಇದನ್ನು ರಾಜ್ಯದ ಶೋಷಿತ ಸಮುದಾಯ ಸಹಿಸುವುದಿಲ್ಲ. ಯಾವ ಅಕ್ರಮವನ್ನೂ ಮಾಡದ ಸಿದ್ದರಾಮಯ್ಯ ಅವರ ಪರವಾಗಿ ನಾವೆಲ್ಲರೂ ಇರುತ್ತೇವೆ ಎಂದು ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಪತನಗೊಳಿಸಲು ಯತ್ನಿಸಿದರೆ ಬೃಹತ್ ಜನಾಂದೋಲನ ಮಾಡುವುದಾಗಿಯೂ ಅವರು ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments