Home ತಾಜಾ ಸುದ್ದಿ 28 ವರ್ಷದ ನಂತರ ಜೆಎನ್ ಯು ವಿದ್ಯಾರ್ಥಿ ನಾಯಕನಾಗಿ ದಲಿತ ಆಯ್ಕೆ!

28 ವರ್ಷದ ನಂತರ ಜೆಎನ್ ಯು ವಿದ್ಯಾರ್ಥಿ ನಾಯಕನಾಗಿ ದಲಿತ ಆಯ್ಕೆ!

by Editor
0 comments

ದೆಹಲಿಯ ಅತ್ಯಂತ ಪ್ರತಿಷ್ಠಿತ ಹಾಗೂ ಚರ್ಚೆಗೆ ಕಾರಣವಾಗಿರುವ ದಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ 28 ವರ್ಷಗಳ ನಂತರ ದಲಿತ ವ್ಯಕ್ತಿ ವಿದ್ಯಾರ್ಥಿ ಸಂಘಟನೆಯ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಎಡಪಕ್ಷಗಳ ಬೆಂಬಲಿತ ವಿದ್ಯಾರ್ಥಿಯಾದ ಧನಂಜಯ್ ಜೆಎನ್ ಯು ವಿದ್ಯಾರ್ಥಿ ನಾಯಕನಾಗಿ ಆಯ್ಕೆಯಾಗಿದ್ದಾರೆ. 1996ರಲ್ಲಿ ಬಟ್ಟಿ ಲಾಲ್ ಭೈರ್ವಾ ನಂತರ ಇದೇ ಮೊದಲ ಬಾರಿ ದಲಿತ ವಿದ್ಯಾರ್ಥಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್ಎ) 2598 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಂಬಲಿತ ಅಭ್ಯರ್ಥಿ ಸಿ.ಅಜ್ಮೀರ 1676 ಮತಗಳನ್ನು ಪಡೆದು ಪರಾಭವಗೊಂಡರು.

ಧನಂಜಯ್ ಬಿಹಾರದ ಬುದ್ಧನ ಜ್ಞಾನೋದಯದ ಊರಾದ ಗಯಾದ ನಿವಾಸಿ. ಸ್ಕೂಲ್ ಆಫ್ ಆರ್ಟ್ ಅಂಡ್ ಸೈನ್ಸ್ ವಿಭಾಗದ ಪಿಎಚ್ ಡಿ ವಿದ್ಯಾರ್ಥಿ ಆಗಿದ್ದಾರೆ.

banner

ಎಡಪಕ್ಷಗಳು ಸ್ಪರ್ಧಿಸಿದ ಎಲ್ಲಾ ನಾಲ್ಕೂ ವಿಭಾಗಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಜೆಎನ್ ಯುನಲ್ಲಿ ಅಧಿಕಾರ ಹಿಡಿದರೆ, ಬಿಜೆಪಿ ಬೆಂಬಲಿತ ಎಬಿವಿಪಿ ತೀವ್ರ ಮುಖಭಂಗಕ್ಕೆ ಒಳಗಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!