Home ತಾಜಾ ಸುದ್ದಿ ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಬಾಂಬ್

ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್‌ ಇಬ್ಭಾಗ: ಬೊಮ್ಮಾಯಿ ಬಾಂಬ್

by Editor
0 comments

ಗದಗ: ಲೋಕಸಭಾ ಚುನಾವಣೆ ಮುಗಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ದೇಶದಲ್ಲಿ ಎರಡು ಹೋಳಾಗುತ್ತದೆ. ಅದರ ಪರಿಣಾಮ ಕರ್ನಾಟಕದ ಮೇಲೆ ಆಗಲಿದ್ದು, ಕಾಂಗ್ರೆಸ್ ನಲ್ಲಿನ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಹಳ ದಿನ ಉಳಿಯಲು ಸಾಧ್ಯವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ ಉದಾಸಿಯವರು ಈ ಕ್ಷೇತ್ರದಲ್ಲಿ ಸಾಕಷ್ಡು ಅಭಿವೃದ್ಧಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾದ ನಂತರ ನೂರಕ್ಕೆ ನೂರು ಕೇಂದ್ರದ ಎಲ್ಲ ಯೋಜನೆಗಳನ್ನು ಈ ಕ್ಷೇತ್ರದಲ್ಲಿ ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಹಾವೇರಿ ಗದಗ ಲೋಕಸಭಾ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರಿಂದ ಅಭೂತಪೂರ್ವವಾದ ಬೆಂಬಲ ದೊರೆಯುತ್ತಿದೆ. ವಿಶೇಷ ವಾಗಿ ನಮ್ಮ ಪಕ್ಷದ ಕಾರ್ಯಕರ್ತರು ಬಹಳ ಉತ್ಸಾಹದಿಂದ ಚುನಾವಣೆ ಮಾಡುವ ನಿರ್ಧಾರ ಮಾಡಿದ್ದಾರೆ. ಕೆ ಎಸ್ ಈಶ್ವರಪ್ಪ ಅವರು ಹಿರಿಯರಿದ್ದಾರೆ ಪಕ್ಷ ಕಟ್ಟುವಲ್ಲಿ ಅವರ ಪಾತ್ರ ದೊಡ್ಡದಿದೆ. ಪಕ್ಷದ ಮುಖಂಡರು ಅವರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಸಮಯವಿದೆ. ಅವರು ಪಕ್ಷದ ತೀರ್ಮಾನವನ್ನು ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಹಾವೇರಿ ಕ್ಷೇತ್ರದಲ್ಲಿ ತಾವು ಮನಸಿಲ್ಲದೇ ಸ್ಪರ್ಧೆ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ಪರ್ಧೆ ಮಾಡುವಂತೆ ವರಿಷ್ಠರು ಸೂಚನೆ ಕೊಟ್ಟಾಗ ಇಲ್ಲಿ ನನ್ನ ಮನಸ್ಸಿನ ಪ್ರಶ್ನೆ ಬರುವುದಿಲ್ಲ. ವರಿಷ್ಠರ ಸೂಚನೆ ಪಾಲಿಸುವುದು ನನ್ನ ಕರ್ತವ್ಯ. ಅದಕ್ಕಾಗಿ ಕರ್ತವ್ಯ ಪಾಲಿಸುತ್ತಿದ್ದೇನೆ. ಎಲ್ಲಿ ಗೆಲ್ಲುವ ವಿಶ್ವಾಸ ಇರುತ್ತದೆ ಅಲ್ಲಿ ಪೈಪೋಟಿ ಇರುತ್ತದೆ. ಕಾಂಗ್ರೆಸ್ ಗೆ ಗೆಲ್ಲುವ ವಿಶ್ವಾಸ ಇಲ್ಲ ಹೀಗಾಗಿ ಅಲ್ಲಿ ಬಂಡಾಯದ ಪ್ರಶ್ನೆ ಬರುವುದಿಲ್ಲ ಎಂದು ಹೇಳಿದರು.

banner

ಪ್ರತಿಸ್ಪರ್ಧಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ನನ್ನ ಪ್ರತಿಸ್ಪರ್ಧಿಯನ್ನು ಗೌರವಿಸುತ್ತೇನೆ. ಅವರನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಗದಗ ಜಿಲ್ಲೆಯಲ್ಲಿ ಗುಂಪುಗಾರಿಕೆ ಇಲ್ಲ. ಎಲ್ಲ ಮುಖಂಡರು ನನ್ನ ಜೊತೆಗಿದ್ದಾರೆ ಎಂದು ಹೇಳಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಾಹನ ಸವಾರರಿಗೆ ಬಿಗ್ ಶಾಕ್: ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ! ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ