Home ಅಪರಾಧ ಅತ್ಯಾಚಾರ ಎಸಗಿದ್ದ ಯುವತಿಯನ್ನು ಮದುವೆ ದಿನವೇ ಲಾಂಗ್ ತೋರಿಸಿ ಕಿಡ್ನಾಪ್ ಮಾಡಲು ಯತ್ನ!

ಅತ್ಯಾಚಾರ ಎಸಗಿದ್ದ ಯುವತಿಯನ್ನು ಮದುವೆ ದಿನವೇ ಲಾಂಗ್ ತೋರಿಸಿ ಕಿಡ್ನಾಪ್ ಮಾಡಲು ಯತ್ನ!

by Editor
0 comments

ಮದುವೆ ದಿನವೇ 22 ವರ್ಷದ ಯುವತಿಯನ್ನು ಖಡ್ಗ ತೋರಿಸಿ ಯುವಕರ ಗುಂಪೊಂದು ಕಿಡ್ನಾಪ್ ಮಾಡಲು ಯತ್ನಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಅಶೋಕನಗರದಲ್ಲಿ ನಡೆದಿದೆ.

ಕುಲು ಅಲಿಯಾಸ್ ಸಲೀಂ ಖಾನ್ ಎಂಬಾತ 22 ವರ್ಷದ ಯುವತಿಯ ಮೇಲೆ ಈ ಹಿಂದೆ ಅತ್ಯಾಚಾರ ಎಸಗಿ ವೀಡಿಯೋ ಮಾಡಿಕೊಂಡಿದ್ದ. ನಂತರ ಆಕೆಯ ಮದುವೆ ನಿಶ್ಚಯ ಆಗುತ್ತಿದ್ದಂತೆ ಕುಟುಂಬಸ್ಥರ ಮೇಲೆ ಹಲ್ಲೆ ಕೂಡ ಮಾಡಿದ್ದ.

ಗುರುವಾರ ಸಂಜೆ ಕುಲು ತನ್ನ ಸ್ನೇಹಿತರಾದ ಜೋಧಾ, ಸಮೀರ್ ಮತ್ತು ಶಾರೂಖ್ ಜೊತೆ ಯುವತಿಯ ಮನೆಗೆ ನುಗ್ಗಿ ಯುವತಿಯ ತಂದೆಯ ಕಾಲು ಮುರಿದು, ಸೋದರನ ಕೈ ಮುರಿದಿದ್ದೂ ಅಲ್ಲದೇ ಆಕೆಯ ತಾಯಿಯ ಮೇಲೆ ಕತ್ತಿ, ರಾಡ್ ಗಳಿಂದ ಭೀಕರವಾಗಿ ಹಲ್ಲೆ ಮಾಡಿ ಯುವತಿಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿದ್ದಾರೆ.

ಈ ವೇಳೆ ಕುಟುಂಬದವರು ನೆರವಾಗಿ ಕೂಗಿಕೊಂಡಿದ್ದರಿಂದ ಜನರು ಸೇರಿದ್ದಾರೆ. ಸ್ಥಳೀಯರಿಗೆ ಲಾಂಗ್, ಮಚ್ಚು ತೋರಿಸಿ ಬೆದರಿಸಿದ ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಪರಾರಿಯಾಗುವ ಮುನ್ನ ಕುಟುಂಬದವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.

banner

ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಂತರ ಸ್ಥಳೀಯ ಹಿಂದೂ ಮುಖಂಡರು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಶೀಘ್ರ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಾಹನ ಸವಾರರಿಗೆ ಬಿಗ್ ಶಾಕ್: ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ! ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ