Saturday, July 6, 2024
Google search engine
Homeಜಿಲ್ಲಾ ಸುದ್ದಿನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೈಸೂರು ದಸರಾದ ಅಶ್ವಥ್ಥಾಮ ಸಾವು!

ನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೈಸೂರು ದಸರಾದ ಅಶ್ವಥ್ಥಾಮ ಸಾವು!

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆ ಅಶ್ವತ್ಥಾಮ ನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೃತಪಟ್ಟಿದೆ.

ಕೆಲವು ತಿಂಗಳ ಹಿಂದೆಯಷ್ಟೇ ಮೈಸೂರು ದಸರಾದ ಅಂಬಾರಿಯನ್ನು 8 ಬಾರಿ ಹೊತ್ತಿದ್ದ ಅರ್ಜುನ ಆನೆ ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ಶಾಂತ ಸ್ವಭಾವಕ್ಕೆ ಹೆಸರಾಗಿದ್ದ ಅಶ್ವಥ್ಥಾಮ ಆನೆ ಮೃತಪಟ್ಟಿರುವುದು ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.

ನಾಗರಹೊಳೆಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಹಾಕಲಾಗಿದ್ದ ಸೋಲಾರ್ ವಿದ್ಯುತ್ ತಂತಿ ತುಳಿದು ಈ ದುರ್ಘಟನೆ ಸಂಭವಿಸಿದೆ.

ಹುಣಸೂರು ಪಿರಿಯಾಪಟ್ಟಣ ಗಡಿ ಭಾಗದಲ್ಲಿರುವ ಆನೆ ಶಿಬಿರದಲ್ಲಿದ್ದ 38 ವರ್ಷದ ಅಶ್ವತ್ಥಾಮ ಆನೆ, ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು.

2017ರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮ ಆನೆಯನ್ನು ಸೆರೆ ಹಿಡಿಯಲಾಗಿತ್ತು. ಬಳಿಕ ಅದನ್ನು ಪಳಗಿಸಿ ಮೈಸೂರು ದಸರಾ ಮಹೋತ್ಸವಕ್ಕೆ ಕರೆತರಲಾಗಿತ್ತು. ಶಾಂತ ಹಾಗೂ ಗಾಂಭಿರ್ಯಕ್ಕೆ ಅಶ್ವತ್ಥಾಮ ಆನೆ ಹೆಸರುವಾಸಿಯಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments