Sunday, September 8, 2024
Google search engine
Homeಅಪರಾಧಹುಬ್ಬಳ್ಳಿಯಲ್ಲಿ ದೇವಸ್ಥಾನ ಪೂಜಾರಿ ಬರ್ಬರ ಹತ್ಯೆ

ಹುಬ್ಬಳ್ಳಿಯಲ್ಲಿ ದೇವಸ್ಥಾನ ಪೂಜಾರಿ ಬರ್ಬರ ಹತ್ಯೆ

ದೇವಸ್ಥಾನದ ಪೂಜಾರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ.

ಈಶ್ವರನಗರದ ವೈಷ್ಣವಿ ದೇವಸ್ಥಾನದ ಅರ್ಚಕ ದೇವಪ್ಪಜ್ಜ ಹತ್ಯೆ ಆಗಿರುವ ಪೂಜಾರಿ.

ದೇವಪ್ಪಜ್ಜ ಅವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆದರೆ ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ಪೂಜಾರಿ ದೇವಪ್ಪಜ್ಜ ಅವರ ಕೊಲೆಗೆ ಒಂದು ವರ್ಷದ ಹಿಂದೆಯೂ ಯತ್ನ ನಡೆದಿತ್ತು. ಆದರೆ ಅದೃಷ್ಟವಶಾತ್ ಹತ್ಯೆ ಪ್ರಯತ್ನದಿಂದ ಪಾರಾಗಿದ್ದರು ಎಂದು ತಿಳಿದು ಬಂದಿದೆ. ನವನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments