Friday, May 17, 2024
Google search engine
Homeತಾಜಾ ಸುದ್ದಿಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರು ಡಿಕ್ಕಿ: ಬಿಜೆಪಿ ಕಾರ್ಯಕರ್ತ ಸಾವು

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರು ಡಿಕ್ಕಿ: ಬಿಜೆಪಿ ಕಾರ್ಯಕರ್ತ ಸಾವು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಸೋಮವಾರ ಸಂಭವಿಸಿದೆ.

ಕೆ.ಆರ್ ಪುರಂನ ಗಣೇಶ ದೇವಸ್ತಾನದ ಬಳಿ ಈ ಘಟನೆ ನಡೆದಿದ್ದು, ಸ್ಕೂಟರ್​ ಸವಾರ ಪ್ರಕಾಶ್ (35) ಮೃತಪಟ್ಟಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಅವರ ಸಿಬ್ಬಂದಿ ನಿಂತಿದ್ದ ಕಾರಿನ ಡೋರ್ ಒಪನ್ ಮಾಡಿದಾಗ ಹಿಂಬದಿಯಿಂದ ಬರುತ್ತಿದ್ದ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಡಿಕ್ಕಿ ಹೊಡೆದು ಬಿದ್ದಿದ್ದಾರೆ.

ಪ್ರಕಾಶ್ ಕೆಳಗೆ ಬೀಳುತ್ತಿದ್ದಂತೆ ಹಿಂದೆ ಬರುತ್ತಿದ್ದ ಬಸ್​ ಅವರ ಮೇಲೆ ಹರಿದಿದ್ದು, ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರಕಾಶ್​ ಸಾವನ್ನಪ್ಪಿದ್ದಾರೆ. ಕೆಆರ್​ ಪುರಂ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೋಮವಾರ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ‌ ಶೋಭಾಕರಂದ್ಲಾಜೆ ಕೆ.ಆರ್ ಪುರಂ ಭಾಗದಲ್ಲಿ ಪ್ರಚಾರ ಮಾಡುತ್ತಿದ್ದರು. ಅವರ ಕಾರನ್ನ ರಸ್ತೆ ಬದಿ ಪಾರ್ಕ್ ಮಾಡಲಾಗಿತ್ತು. ಈ ವೇಳೆ ಕಾರಿನ ಚಾಲಕ ಡೋರ್ ತೆಗೆದಿದ್ದು, ಹಿಂದೆಯಿಂದ ಬಂದ ಪ್ರಕಾಶ್​ಗೆ ಬಡಿದು ರಸ್ತೆಯ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ಅಲ್ಲಿಗೆ ಖಾಸಗಿ ಬಸ್ ಅವರ ಮೇಲೆ ಹರಿದಿದೆ. ತಕ್ಷಣವೇ ಕಾರ್ಯಕರ್ತರು ಪ್ರಕಾಶ್​ರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್​ ಸಾವನ್ನಪ್ಪಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಇದೊಂದು ಅನಿರೀಕ್ಷಿತ ಘಟನೆ, ನಾವೆಲ್ಲರೂ ಮುಂದೆ ಹೋಗಿದ್ದೆವು, ಕಾರು ರಸ್ತೆ ಬದಿಯಲ್ಲಿ ನಿಂತಿತ್ತು. ನಮ್ಮ ಕಾರ್ಯಕರ್ತ ಪ್ರಕಾಶ್ ಅವರು ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಅವರ ಮೇಲೆ ಬಸ್​ ಹರಿದಿದ್ದು, ಗಾಯಗೊಂಡಿದ್ದರು. ಆದರೆ ಅವರಿಗೆ ಯಾವ ರೀತಿ ಗಾಯವಾಗಿದೆ ಎಂಬುದು ಶವ ಪರೀಕ್ಷೆಯಿಂದ ತಿಳಿದುಬರಲಿದೆ. ತಕ್ಷಣವೇ ಪೋಸ್ಟ್ ಮಾರ್ಟಮ್​ ಮಾಡಲು ಪೊಲೀಸರಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಮನವಿ ಮಾಡಿದ್ದೇವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments