Home ತಾಜಾ ಸುದ್ದಿ 3ನೇ ಬಾರಿ ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ: ಇಂಡಿಯಾ ನಡೆ ನಿಗೂಢ!

3ನೇ ಬಾರಿ ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ: ಇಂಡಿಯಾ ನಡೆ ನಿಗೂಢ!

by Editor
0 comments
pm-modi

ಬಿಜೆಪಿ ಪಕ್ಷಕ್ಕೆ ಪೂರ್ಣ ಬಹುಮತ ಲಭಿಸದೇ ಇದ್ದರೂ ಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಲಭಿಸಿರುವ ಹಿನ್ನೆಲೆಯಲ್ಲಿ 3ನೇ ಬಾರಿ ಸರ್ಕಾರ ರಚನೆಗೆ ಸಿದ್ಧತೆ ಆರಂಭಿಸಿದೆ.

ಪ್ರಧಾನಿ ಮೋದಿ ಹೆಸರಿನಲ್ಲಿ ಚುನಾವಣೆ ಎದುರಿಸಿದ ಬಿಜೆಪಿ ನಿರೀಕ್ಷಿತ ಫಲಿತಾಂಶ ಪಡೆಯಲಿಲ್ಲ. ಅಲ್ಲದೇ ಮೋದಿ ಸಂಪುಟದಲ್ಲಿದ್ದ 16ಕ್ಕೂ ಹೆಚ್ಚು ಸಚಿವರು ಸೋಲುಂಡಿದ್ದಾರೆ. ಅಲ್ಲದೇ ಬಿಜೆಪಿ 350ಕ್ಕೂ ಅಧಿಕ ಸ್ಥಾನದಲ್ಲಿ ಗೆಲ್ಲಲಿದೆ ಎಂಬ ನಿರೀಕ್ಷೆ ಸುಳ್ಳಾಗಿದ್ದು, 241 ಸ್ಥಾನಕ್ಕೆ ಕುಸಿದಿದೆ.

ಇದರಿಂದ ಮಿತ್ರಪಕ್ಷಗಳ ಜೊತೆಗೂಡಿ ಸರ್ಕಾರ ರಚಿಸಬೇಕಾದ ಸ್ಥಿತಿಗೆ ಬಿಜೆಪಿ ತಲುಪಿದ್ದು, ಯಾವುದೇ ತೀರ್ಮಾನ ಕೈಗೊಳ್ಳಬೇಕಾದರೂ ಈ ಪಕ್ಷಗಳ ಸಲಹೆ ಪಡೆಯಬೇಕಾಗುತ್ತದೆ.

ಮೋದಿ ಹೆಸರಿನಲ್ಲಿ ಚುನಾವಣೆ ಎದುರಿಸಿದ್ದ ಬಿಜೆಪಿ ಕಳಪೆ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಮೋದಿ ಮತ್ತೆ ಪ್ರಧಾನಿ ಹುದ್ದೆ ಅಲಂಕರಿಸುತ್ತಾರೋ ಅಥವಾ ಎರಡರಿಂದ ಮೂರು ವರ್ಷಗಳ ಕಾಲ ಪ್ರಧಾನಿ ಆಗಿದ್ದು ನಂತರ ಬೇರೆಯವರಿಗೆ ಬಿಟ್ಟುಕೊಡುತ್ತಾರೋ ಎಂಬ ಕುತೂಹಲ ಬಿಜೆಪಿ ಪಾಳಯದಲ್ಲಿದೆ.

banner

ಮಿತ್ರಪಕ್ಷಗಳ ಪೈಕಿ ಜೆಡಿಯುನ ನಿತೀಶ್ ಕುಮಾರ್ ನಡೆ ನಿಗೂಢವಾಗಿದ್ದು, ಪ್ರಧಾನಿ ಪಟ್ಟದ ಆಕಾಂಕ್ಷಿ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಂಡಿಯಾ ಮೈತ್ರಿಕೂಟದ ಕಡೆ ವಾಲುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇದೆಲ್ಲದರ ನಡುವೆ ಇಂಡಿಯಾ ಮೈತ್ರಿಕೂಟ ಇಂದು ಸಭೆ ಕರೆದಿದ್ದು, ಮೈತ್ರಿಕೂಟದ ಸಭೆಯಲ್ಲಿ ಸರ್ಕಾರ ರಚನೆ ಕುರಿತು ತಂತ್ರಗಾರಿಕೆ ರೂಪಿಸುವ ಸಾಧ್ಯತೆ ಇದೆ. ಈ ಸಭೆಗೆ ನಿತೀಶ್ ಕುಮಾರ್ ಬರುತ್ತಾರಾ ಎಂಬ ಕುತೂಹಲ ಮೂಡಿದೆ. ಮತ್ತೊಂದೆಡೆ ತೆಲುಗುದೇಶಂನ ಚಂದ್ರಬಾಬು ನಾಯ್ಡು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!