Friday, October 18, 2024
Google search engine
Homeಜಿಲ್ಲಾ ಸುದ್ದಿವಿಜಯಪುರ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ: ತಪ್ಪಿದ ಭಾರೀ ದುರಂತ!

ವಿಜಯಪುರ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ: ತಪ್ಪಿದ ಭಾರೀ ದುರಂತ!

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡಿದ್ದು, ಕಾರ್ಮಿಕರು ಕೂದಲೆಳೆ ಅಂತರದಿಂದ ಪಾರಾಗಿ ದೊಡ್ಡ ದುರಂತವೊಂದು ತಪ್ಪಿದೆ.

ಭಾನುವಾರ ಮುಂಜಾನೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 15 ಜನ ಕಾರ್ಮಿಕರು ಟೀ‌ ಕುಡಿಯಲು ಹೊರಗೆ ಹೋದ ಕೆಲವೇ ನಿಮಿಷಗಳ ನಂತರ ಬಾಯ್ಲರ್ ಸ್ಫೋಟಗೊಂಡಿದೆ. ಇದರಿಂದ ಕಾರ್ಮಿಕರು ಕೂದಲೆಳೆ ಅಂತರದಿಂದ ಅಪಾಯದಿಂದ ಪಾರಾಗಿದ್ದಾರೆ.

ಮುಂದಿನ ಅವಧಿಗೆ ಕಬ್ಬು ನುರಿಸಲು ಕಾರ್ಖಾನೆ ಸಿದ್ದತೆ ಮಾಡುವ ವೇಳೆ ಬಾಯ್ಲರ್ ಸ್ಫೋಟಗೊಂಡಿದ್ದು, ಈ‌ ಹಿಂದೆ 2023 ರ ಮಾರ್ಚ್ 4 ರಂದು ಕೂಡ ಬಾಯ್ಲರ್ ಸ್ಫೋಟಗೊಂಡು ಓರ್ವ ಕಾರ್ಮಿಕ ಮೃತಪಟ್ಟು ನಾಲ್ವರು ಗಾಯಗೊಂಡಿದ್ದರು.
ಕಳಪೆ  ಗುಣಮಟ್ಟದ ಬಾಯ್ಲರ್ ನಿಂದ ಪದೇಪದೇ ಸ್ಫೋಟವಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments