Sunday, September 8, 2024
Google search engine
Homeಅಪರಾಧಬಿಎಸ್ ಪಿ ಮುಖಂಡನ ಕೊಲೆಗಾರ ಪೊಲೀಸ್ ಎನ್ ಕೌಂಟರ್ ಗೆ ಬಲಿ!

ಬಿಎಸ್ ಪಿ ಮುಖಂಡನ ಕೊಲೆಗಾರ ಪೊಲೀಸ್ ಎನ್ ಕೌಂಟರ್ ಗೆ ಬಲಿ!

ತಮಿಳುನಾಡಿನ ಬಹುಜನ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಆರ್ಮಸ್ಟ್ರಾಂಗ್ ಅವರನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.

ಆರ್ಮಸ್ಟ್ರಾಂಗ್ ಅವರನ್ನು ಕೊಲೆ ಮಾಡಿದ್ದ ಆರೋಪಿ ತಿರುವೆಂಗಡ್ಯಾಮ್ ನ ಬಳಿ ಇದ್ದ ಅಕ್ರಮ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವ ವೇಳೆ ರಿಕವರಿ ಮಾಡಿದ್ದ ರಿವಾಲ್ವರ್ ನಿಂದ ಪೊಲೀಸರ ಮೇಲೆ ದಾಳಿ ಮಾಡಿದಾಗ ಪ್ರತಿದಾಳಿ ನಡೆಸಿದ ಪೊಲೀಸರು ಹತ್ಯೆ ಮಾಡಿದ್ದಾರೆ.

ಪೊಲೀಸರ ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ತಿರುವೆಂಗಡ್ಯಾಮ್ ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಆರ್ಮಸ್ಟ್ರಾಂಗ್ ತಮ್ಮ ನಿರ್ಮಾಣ ಹಂತದ ಮನೆಗೆ ಭೇಟಿ ನೀಡಿದಾಗ 6 ಮಂದಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದರು. ಪ್ರಕರಣದ ತನಿಖೆಗೆ ಚೆನ್ನೈ ಪೊಲೀಸರು 6 ಪೊಲೀಸರ ವಿಶೇಷ ತಂಡ ರಚಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments