Home ತಾಜಾ ಸುದ್ದಿ ಬೆಂಗಳೂರಿಗೆ ಬಂಪರ್ ಉಡುಗೊರೆ: ಶಾಶ್ವತ ಮಳೆ ಹಾನಿ ತಡೆಗೆ 5000 ಕೋಟಿ ರೂ. ಯೋಜನೆ!

ಬೆಂಗಳೂರಿಗೆ ಬಂಪರ್ ಉಡುಗೊರೆ: ಶಾಶ್ವತ ಮಳೆ ಹಾನಿ ತಡೆಗೆ 5000 ಕೋಟಿ ರೂ. ಯೋಜನೆ!

ಬೆಂಗಳೂರಿನಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಕೋಟಿ ರೂ. ಗಳ ಶಾಶ್ವತ ಯೋಜನೆ ರೂಪಿಸಲಾಗಿದೆ

by Editor
0 comments
krishna byre gowda

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಕೋಟಿ ರೂ. ಗಳ ಶಾಶ್ವತ ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಿಧಾನಸಭೆ ಕಲಾಪದಕಲ್ಲಿ ಅವರು ಈ ವಿಷಯ ತಿಳಿಸಿದರು.

ಬೆಂಗಳೂರು ವ್ಯಾಪ್ತಿಯಲ್ಲಿ ಅತಿಹೆಚ್ಚು ಮಳೆ ಸುರಿದಾಗ ಪದೇ ಪದೇ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ.  ಮಳೆ ಸುರಿದಂತಹ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವೆ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವೆಗಳನ್ನು ಪರಿಪಕ್ವವಾಗಿ ಸುಧಾರಿಸಲು ಕ್ರಮ ವಹಿಸಲಾಗಿದೆ.  ಈ ವ್ಯಾಪ್ತಿಯಲ್ಲಿ 856 ಕಿ.ಮೀ. ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿ.ಮೀ. ಕಿರು ಕಾಲುವೆಗಳು ಸೇರಿದಂತೆ ಒಟ್ಟು 1100 ಕಿ.ಮೀ. ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ.  ಈಗಾಗಲೆ 700 ಕಿ.ಮೀ. ಅಭಿವೃದ್ಧಿಪಡಿಸಲಾಗಿದ್ದು ಇನ್ನೂ 300 ಕಿ.ಮೀ. ರಾಜಕಾಲುವೆಯನ್ನು ಬರುವ ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದಕ್ಕಾಗಿ ಡಿಸಾಸ್ಟರ್ ಮಿಟಿಗೇಶನ್ ಫಂಡ್ ನಡಿ 240 ಕೋಟಿ ರೂ. ಒದಗಿಸಲಾಗುತ್ತಿದೆ ಎಂದರು.

ರಾಜಕಾಲುವೆಗಳ ಅಭಿವೃದ್ದಿಗೆ 3 ಸಾವಿರ ಕೋಟಿ :

banner

ಬೆಂಗಳೂರಿನಲ್ಲಿ ಮಳೆ ಬಂದಾಗ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂ.ವೆಚ್ಚದಲ್ಲಿ ಶಾಶ್ವತ ಪರಿಹಾರ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ.

ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಒಂದು ಬಾರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೆ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ.  ವಿಶ್ವಬ್ಯಾಂಕ್‌ನಿAದ 3000 ಕೋಟಿ ರೂ. ಸಾಲ ಪಡೆದು, ಬಿಬಿಎಂಪಿ ಮೂಲಕ  2000 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.

ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇರದ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ರೂಪಿಸಿ ಸದರಿ ಒಳಚರಂಡಿ ನೀರು ನೇರವಾಗಿ ಸೀವೆಜ್ ಟ್ರೀಟ್‌ಮೆಂಟ್ ವಾಟರ್ ಲೈನ್‌ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ಕೆ ಬೆಂಗಳೂರು ಜಲಮಂಡಳಿಗೆ 01 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ.  ಇನ್ನಿತರೆ ಕಾಮಗಾರಿಗಳಿಗಾಗಿ 02 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದರು.

2000 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ಭರಿಸಲು ನಿರ್ಧರಿಸಲಾಗಿದೆ.  ಬೆಂಗಳೂರಿನಲ್ಲಿ ಮಳೆಯಿಂದ ಪದೇ ಪದೇ ಹಾನಿಗೀಡಾಗುವ ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದ್ದು, ಇಂತಹ ರಸ್ತೆಗಳನ್ನು ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂ. ಗಳ ಯೋಜನೆ ರೂಪಿಸಿ, ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.  ಒಟ್ಟಾರೆ ಬೆಂಗಳೂರಿನಲ್ಲಿ ಅತಿಯಾದ ಮಳೆಯಾದಾಗ ಹಾನಿಯಾಗುವುದನ್ನು ತಡೆಗಟ್ಟಲು ಸರ್ಕಾರ ಶಾಶ್ವತವಾದ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಾಹನ ಸವಾರರಿಗೆ ಬಿಗ್ ಶಾಕ್: ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ! ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ