Kannadavahini

ಬಾರಿಸು ಕನ್ನಡ ಡಿಂಡಿಮವ

siddaramiah
ತಾಜಾ ಸುದ್ದಿ ರಾಜ್ಯ

ರಾಜ್ಯದ ಜಾನುವಾರು ಗಣತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಜಾನುವಾರು ಗಣತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಜಾನುವಾರು ಗಣತಿ ಕಾರ್ಯಕ್ಕೆ ಇಂದು ಚಾಲನೆ ನೀಡಿದರು.

ಬೆಂಗಳೂರಿನಲ್ಲಿ ಮಂಗಳವಾರ ಸಿದ್ದರಾಮಯ್ಯ ಜಾನುವಾರು ಗಣತಿ ಸಮೀಕ್ಷೆಗೆ ಚಾಲನೆ ನೀಡಿದರು. ಈ ಮೂಲಕ ರಾಜ್ಯದಲ್ಲಿರುವ ಕುರಿ, ಕೋಣ, ಹಸು ಸೇರಿದಂತೆ ಎಲ್ಲಾ ಜಾನುವಾರುಗಳ ಸಮೀಕ್ಷೆ ಕಾರ್ಯ ನಡೆಯಲಿದೆ.

ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರೇಷ್ಮೆ ಸಚಿವರಾದ ಕೆ ವೆಂಕಟೇಶ್, ಪಶು ಸಂಗೋಪನಾ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಡಾ. ಅಜಯ್ ನಾಗಭೂಷಣ್ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಜಾನುವಾರು ಗಣತಿ ಕಾರ್ಯ 2025ರ ಫೆಬ್ರವರಿ ತಿಂಗಳವರೆಗೆ ನಡೆಯಲಿದೆ.

LEAVE A RESPONSE

Your email address will not be published. Required fields are marked *