Kannadavahini

ಬಾರಿಸು ಕನ್ನಡ ಡಿಂಡಿಮವ

ಅಪರಾಧ ತಾಜಾ ಸುದ್ದಿ ರಾಜ್ಯ

ಪೊಲೀಸ್ ಠಾಣೆಯಲ್ಲಿ ಕುಸಿದುಬಿದ್ದ ದರ್ಶನ್ ಆಪ್ತೆ ಪವಿತ್ರಾ ಗೌಡ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದರ್ಶನ್ ಆಪ್ತೆ ಹಾಗೂ ನಟಿ ಪವಿತ್ರಾ ಗೌಡ ಪೊಲೀಸ್ ಠಾಣೆಯಲ್ಲಿ ಅಸ್ವಸ್ಥರಾಗಿ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಮಾಕ್ಷಿಪಾಳ್ಯ ಪೊಲೀಸರ ಕಸ್ಟಡಿಯಲ್ಲಿ ವಿಚಾರಣೆ ಎದುರಿಸುತ್ತಿರುವ ಪವಿತ್ರಾ ಗೌಡ ಮಂಗಳವಾರ ಮಧ್ಯಾಹ್ನ ಅಸ್ವಸ್ಥಗೊಂಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರನ್ನು ಕರೆಸಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಪವಿತ್ರಾ ಗೌಡ ಅವರನ್ನು ವೈದ್ಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್‌ ಮತ್ತು ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಯ ಹಿನ್ನೆಲೆಯಲ್ಲಿ ಸದ್ಯ ಇವರು ಪೊಲೀಸ್‌ ಕಸ್ಟಡಿಯಲ್ಲಿದೆ.

ಪೊಲೀಸ್ ಕಸ್ಟಡಿ ವೇಳೆ ಸರಿಯಾಗಿ ಊಟ, ತಿಂಡಿ ಸೇವಿಸದೆ ಇರುವುದರಿಂದ ಪವಿತ್ರಾ ಗೌಡ ಲೋ ಬಿಪಿಯಿಂದ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗಿದೆ. ಮಧ್ಯಾಹ್ನ ಕೂಡ ಅವರು ಊಟ ಮಾಡಿರಲಿಲ್ಲ. ಹೀಗಾಗಿ ಸತತ ವಿಚಾರಣೆ ವೇಳೆ ಅಸ್ವಸ್ಥಳಾಗಿ ಕುಸಿದುಬಿದ್ದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

LEAVE A RESPONSE

Your email address will not be published. Required fields are marked *