Saturday, September 7, 2024
Google search engine
Homeತಾಜಾ ಸುದ್ದಿಕೊಲ್ಲೂರು ಮೂಕಾಂಬಿಕಾದಲ್ಲಿ ನವ ಚಂಡಿಕಾ ಹೋಮ ನಡೆಸಲಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ!

ಕೊಲ್ಲೂರು ಮೂಕಾಂಬಿಕಾದಲ್ಲಿ ನವ ಚಂಡಿಕಾ ಹೋಮ ನಡೆಸಲಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆಗೆ ಪತ್ನಿ ವಿಜಯಲಕ್ಷ್ಮೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ನವ ಚಂಡಿಕಾ ಹೋಮಾದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜೈಲಿನಲ್ಲಿರುವ ದರ್ಶನ್ ಗೆ ಮನೆ ಊಟ ಸಿಗುತ್ತಿಲ್ಲ. ಅಲ್ಲದೇ ಕೊಲೆ ಕೇಸ್ ನಲ್ಲಿ ದಿನಕ್ಕೊಂದು ತಿರುವು ಸಿಗುತ್ತಿದ್ದು, ಜಾಮೀನು ದೊರೆಯುತ್ತಿಲ್ಲ. ಈ ಎಲ್ಲಾ ಸಂಕಷ್ಟಗಳ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೌಪ್ಯವಾಗಿ ಭೇಟಿ ಮಾಡಿದ್ದ ವಿಜಯಲಕ್ಷ್ಮೀ, ನಂತರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಯಾವುದೇ ಆಶಾಕಿರಣ ಕಾಣದ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದೇವರ ಮೊರೆ ಹೋಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಗುರುವಾರ ಆಪ್ತರ ಜೊತೆ ಕುಂದಾಪುರ ಜಿಲ್ಲೆಯ ಬೈಂದೂರು ಬಳಿ ಇರುವ ಖ್ಯಾತ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಜಯಲಕ್ಷ್ಮೀ ಶುಕ್ರವಾರ ಬೆಳಿಗ್ಗೆ ನಡೆಯಲಿರುವ ನವ ಚಂಡಿಕಾ ಹೋಮಾದಲ್ಲಿ ಪಾಲ್ಗೊಳ್ಳಲಿದ್ದಾರೆ.

ದರ್ಶನ್ ಅವರನ್ನು ಸಂಕಷ್ಟದಿಂದ ಬಿಡುಗಡೆ ಮಾಡಲು ನವ ಚಂಡಿಕಾ ಹೋಮಾದಲ್ಲಿ ಸಂಕಲ್ಪ ಮತ್ತು ಪರಾಯಣದಲ್ಲಿ ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments