Friday, October 4, 2024
Google search engine
Homeಜಿಲ್ಲಾ ಸುದ್ದಿಮಂಡ್ಯ ಲೋಕಸಭಾ ಕ್ಷೇತ್ರದಿಂದ ಹಿಂದೆ ಸರಿದ ಸುಮಲತಾ: ಕುಮಾರಸ್ವಾಮಿಗೆ ಬೆಂಬಲ ಘೋಷಣೆ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹಿಂದೆ ಸರಿದ ಸುಮಲತಾ: ಕುಮಾರಸ್ವಾಮಿಗೆ ಬೆಂಬಲ ಘೋಷಣೆ

ಮಂಡ್ಯ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಷ್ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದಾರೆ. ಈ ಮೂಲಕ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದ್ದಾರೆ.

ಮಂಡ್ಯದಲ್ಲಿ ಬುಧವಾರ ಬೆಂಬಲಿಗರ ಸಭೆಯಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ ಸುಮಲತಾ, ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿಗೆ ಬೆಂಬಲ ಘೋಷಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸದೇ ಇರುವ ನಿರ್ಧಾರ ಪ್ರಕಟಿಸಿದರು.

2019ರ ಲೋಸಕಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನನ್ನ ಪರ ಮತ ಚಲಾಯಿಸುವಂತೆ ಮೈಸೂರಿನಲ್ಲಿ ಕರೆ ನೀಡಿದ್ದರು. ನಾನು ಕಳೆದ ರಾಜ್ಯಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದೆ. ನನಗೆ ರಾಜಕೀಯ ಅಸ್ತಿತ್ವದ ಭಯ ಇಲ್ಲ. ಮಂಡ್ಯದ ಸೊಸೆಯಾಗಿ ಶಾಶ್ವತವಾಗಿ ಇರುತ್ತೇನೆ. ಆದ್ದರಿಂದ ಈ ಬಾರಿ ಮಂಡ್ಯದಿಂದ ಸ್ಪರ್ಧಿಸದೇ ಇರಲು ನಿರ್ಧರಿಸಿದ್ದಾಗಿ ಸುಮಲತಾ ತಿಳಿಸಿದರು.

ಅಂಬರೀಷ್ ಅವರಿದ್ದ ಕಾಂಗ್ರೆಸ್ ಪಕ್ಷಕ್ಕೆ ನಾನು ಅಗತ್ಯವಿಲ್ಲ. ನನಗೆ ಗೌರವ ಇಲ್ಲದ ಕಡೆ ನಾನು ಹೋಗಲಾರೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಪ್ರಧಾನಿ ಮೋದಿ ಸಲಹೆ ಮೇರೆಗೆ ನಾನು ಸ್ಪರ್ಧಿಸದೇ ಇರಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments