Thursday, October 24, 2024
Google search engine
Homeತಾಜಾ ಸುದ್ದಿಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ, ಅಖಾಡಕ್ಕಿಳಿದ ದೇವೇಗೌಡರು!

ಚನ್ನಪಟ್ಟಣ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ, ಅಖಾಡಕ್ಕಿಳಿದ ದೇವೇಗೌಡರು!

ಪ್ರತಿಷ್ಠಿತ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದೆ. ಮೊಮ್ಮಗನ ಗೆಲುವಿನ ಖುದ್ದು ತಾವೇ ಅಖಾಡಕ್ಕೆ ಇಳಿಯುವುದಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಘೋಷಿಸಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಗುರುವಾರ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಿಸಿತು. ಸಭೆಯಲ್ಲಿ ಮಾತನಾಡಿದ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಹೇಗಾದರೂ ಮಾಡಿ ಮುಗಿಸಬೇಕು ಎಂದು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಆದ್ದರಿಂದ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಖುದ್ದು ನಾನೇ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಘೋಷಿಸಿದರು.

ಜೆಡಿಎಸ್ ಅಭ್ಯರ್ಥಿಯನ್ನಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕು ಎಂದು ಸ್ಥಳೀಯ ಕಾರ್ಯಕರ್ತರು ಒತ್ತಡ ಹೇರಿದ್ದಾರೆ. ದೇವೇಗೌಡರ ಕುಟುಂಬದ ಕುಡಿಯನ್ನೇ ನಿಲ್ಲಿಸಿ ಎಂದು ಪಟ್ಟು ಹಿಡಿದಿದ್ದರಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕಾಯಿತು ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments