Thursday, September 19, 2024
Google search engine
Homeಅಪರಾಧಜಿಮ್ ತರಬೇತುದಾರನ ಮೇಲೆ ಹಲ್ಲೆ: ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್

ಜಿಮ್ ತರಬೇತುದಾರನ ಮೇಲೆ ಹಲ್ಲೆ: ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್

ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ಅವರನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

ಮೇ 26ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎಂಬುವವರು ಹಲ್ಲೆ ಮಾಡಿದ್ದರು.
ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆಗೆ ಧ್ರುವ ಮ್ಯಾನೇಜರ್ ಅಶ್ವಿನ್ ನಾಗೇಂದ್ರಗೆ ಸಾಥ್ ಕೊಟ್ಟಿದ್ದ ಎಂದು ತಿಳಿದು ಬಂದಿದೆ.

ಪ್ರಶಾಂತ್ ಪೂಜಾರಿ ಅವರು ಧ್ರುವ ಸರ್ಜಾಗೆ ಆಪ್ತರಾಗಿದ್ದರು. ಧ್ರುವಗೆ ಜಿಮ್‌ನಲ್ಲಿ ತರಬೇತಿ ನೀಡುತ್ತಿದ್ದುದ್ದು ಇದೇ ಪ್ರಶಾಂತ್. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್‌ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ ಎನ್ನಲಾಗಿದೆ.

ಹೀಗಾಗಿ ಹಲ್ಲೆಗೆ ಪ್ಲ್ಯಾನ್ ರೂಪಿಸಿದರು. ತಾವೇ ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ಸ್ನೇಹಿತರ ಕೈಯಲ್ಲಿ ಹಲ್ಲೆ ಮಾಡಿಸಿದ್ದರಂತೆ. ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಅವರನ್ನು ಮುಂದಕ್ಕೆ ಬಿಟ್ಟು ಅಶ್ವಿನ್ ಹಲ್ಲೆ ಮಾಡಿಸಿದ್ದರು.

ತನಿಖೆ ವೇಳೆ ಅಶ್ವಿನ್ ಪಾತ್ರ ಇರುವುದು ಬೆಳಕಿಗೆ ಬಂದಿದೆ. ಈ ಹಿನ್ನಲೆಯಲ್ಲಿ ಅಶ್ವಿನ್ ಬಂಧಿಸಲಾಗಿತ್ತು. ಆದರೆ ಕಳೆದ 10 ದಿನಗಳ ಹಿಂದೆ ವಿಚಾರಣೆ ಎದುರಿಸಿ ಜಾಮೀನು ಪಡೆದು ಅಶ್ವಿನ್ ಹೊರ ಬಂದಿದ್ದಾರೆ.

ಕಳೆದ ವರ್ಷ ಅಶ್ವಿನ್ ಹುಟ್ಟುಹಬ್ಬಕ್ಕೆ ಧ್ರುವ ಸರ್ಜಾ ದುಬಾರಿ ಫಾರ್ಚೂನರ್ ಕಾರನ್ನು ಗಿಫ್ಟ್ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments