Home ಅಪರಾಧ ಪ್ರಿಯಕರನಿಗೆ ಗೂಡ್ಸ್ ವಾಹನ ಕೊಡಿಸಲು ದಿವ್ಯಾ ಕೊಲೆ ಮಾಡಿಸಿದ ಬಾಡಿಗೆಗೆ ಇದ್ದ ಯುವತಿ!

ಪ್ರಿಯಕರನಿಗೆ ಗೂಡ್ಸ್ ವಾಹನ ಕೊಡಿಸಲು ದಿವ್ಯಾ ಕೊಲೆ ಮಾಡಿಸಿದ ಬಾಡಿಗೆಗೆ ಇದ್ದ ಯುವತಿ!

by Editor
0 comments

ಪ್ರಿಯಕರನಿಗೆ ಗೂಡ್ಸ್ ವಾಹನ ಕೊಡಿಸಲು ಯುವತಿಯೊಬ್ಬಳು ದಿವ್ಯಾ ಕೊಲೆ ಮಾಡಿಸಿರುವುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಕೆಂಗೇರಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆ ಕತ್ತು ಹಿಸುಕಿ ಕೊಲೆಯಾದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಮನೆಯಲ್ಲಿ ಬಾಡಿಗೆ ಇದ್ದ ಯುವತಿಯೇ ತನ್ನ ಲವರ್‌ಗೆ ಗಾಡಿ ಕೊಡಿಸಲು ಕೊಲೆ ಮಾಡಿದ್ದಾಳೆ ಎಂಬುದು ಪತ್ತೆಯಾಗಿದೆ.

ಮೇ 10 ಶುಕ್ರವಾರದಂದು ದಿವ್ಯಾ (36) ಕೊಲೆಯಾಗಿತ್ತು. ದಿವ್ಯಾ ಅವರ ಬಾಡಿಗೆ ಮನೆಯಲ್ಲೇ ವಾಸವಿದ್ದ ಕೋಲಾರ ಮೂಲದ ಮೋನಿಕಾ ಕೊಲೆ ಮಾಡಿ ಸಿಕ್ಕಿಬಿದ್ದಿದ್ದಾರೆ.

ಸಲೂನ್‌ ಶಾಪ್‌ ಹೊಂದಿರುವ ಗುರುರಾಜ್‌, ಪತ್ನಿ ದಿವ್ಯಾ ಜತೆ ಕೋನಸಂದ್ರದಲ್ಲಿಸ್ವಂತ ಮನೆಯಲ್ಲಿ ವಾಸಿಸುತ್ತಿದ್ದರು. ಮೇ 10ರಂದು ಮಧ್ಯಾಹ್ನ 1.30ರ ಸುಮಾರಿಗೆ ದಿವ್ಯಾ ಕತ್ತುಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿ ಅವರ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದರು.

banner

ಕೋಲಾರ ಮೂಲದ ಮೋನಿಕಾ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡಿದ್ದು, ಕಳೆದ‌‌ ಮೂರು ತಿಂಗಳಿಂದ ಮೃತೆ ದಿವ್ಯಾ ಮನೆಯಲ್ಲಿ ಬಾಡಿಗೆಯಿದ್ದಳು. ಕಂಪನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ಕೆಲಸ ತೊರೆದಿದ್ದಳು. ಬಳಿಕ ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸಲು ಈ ಕೃತ್ಯ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

ಮೋನಿಕಾ ಲವರ್‌ ಟಾಟಾ ಎಸಿ ವಾಹನ‌ ಖರೀದಿಗೆ ಹಣದ‌‌ ಮುಗ್ಗಟ್ಟು ಎದುರಿಸಿದ್ದ. ಜೊತೆ ಈಕೆಯ ಮೇಲಿನ ಸಾಲ ಒತ್ತಡ ಸೃಷ್ಟಿಸಿತ್ತು. ಮನೆ ಮಾಲಕಿ ದಿವ್ಯಾ ಮೈ‌‌ ಮೇಲಿದ್ದ ಒಡವೆ ಮೇಲೆ ಮೋನಿಕಾಳ ಕಣ್ಣು ಕುಕ್ಕಿಸಿತ್ತು. ಸಲುಗೆ ಬೆಳೆಸಿಕೊಂಡು ಮನೆ ಮಾಲೀಕರ ಚಲನಾವಲನಾಗಳ ಗಮನಿಸಿ ಯುವತಿ ಹತ್ಯೆಗೆ ಸಂಚು ರೂಪಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ದಿವ್ಯಾ ಗಂಡ ಗುರುಮೂರ್ತಿ ಎಂದಿನಂತೆ ಕೆಲಸಕ್ಕಾಗಿ ಹೋಗಿದ್ದಾಗ ದಿವ್ಯಾ ಅವರ ಮೈಮೇಲಿದ್ದ 36 ಗ್ರಾಂ ಚಿನ್ನದ ಸರ ಕಸಿದು‌ ಸುಮ್ಮನಾಗಿದ್ದಳು. ಗುರುಮೂರ್ತಿ ಬಂದ ಬಳಿಕಕೊ ಲೆಯಾಗಿರುವ ವಿಷಯ ಬೆಳಕಿಗೆ ಬಂದಿತ್ತು. ಕುತ್ತಿಗೆ ಮೇಲೆ ಗಾಯದ ಗುರುತುವಿರುವುದು ಹಾಗೂ ಚಿನ್ನದ‌ ಸರ ಇಲ್ಲದಿರುವುದನ್ನ ಕಂಡು ಪತ್ನಿಯನ್ನ ಹತ್ಯೆ ಮಾಡಿದ್ದಾರೆಂದು ದೂರು ನೀಡಿದ‌ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಡಿಗೆಗಿದ್ದ ಯುವತಿಯನ್ನ ಬಂಧಿಸಿದ್ದಾರೆ.

ಕದ್ದ ಚಿನ್ನಸರವನ್ನ ಅಂಗಡಿಯೊಂದರಲ್ಲಿ ಗಿರವಿ ಇಟ್ಟಿದ್ದಳು. ಇನ್ನು ಅದೇ ಮನೆಯಲ್ಲೇ‌ ಉಳಿದುಕೊಂಡು ಏನು‌ ಮಾಡಿಲ್ಲವೆಂಬಂತೆ ನಟಿಸಿದ್ದಳು. ತನಿಖೆ‌ ಕೈಗೊಂಡ ಇನ್ ಸ್ಪೆಕ್ಟರ್ ಕೊಟ್ರೇಶಿ‌ ನೇತೃತ್ವದ ತಂಡವು ಅನುಮಾನದ ಮೇರೆಗೆ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಸತ್ಯ ಸಂಗತಿ ಬಾಯ್ಬಿಟ್ಟಿದ್ದಾಳೆ. ಸದ್ಯ ಆಕೆಯನ್ನ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಸಾಮೂಹಿಕ ಅತ್ಯಾಚಾರ ಎಸಗಿದ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಎಫ್ ಐಆರ್ ದಾಖಲು! ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ! ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟ! ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ, ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ದಲಿತ ಅಥ್ಲೀಟ್ ಮೇಲೆ 65 ಜನರಿಂದ ಅತ್ಯಾಚಾರ: 44 ಮಂದಿ ಬಂಧನ