Home ಆರೋಗ್ಯ ಸಕ್ಕರೆಯಲ್ಲಿ ಬೆರಸಿ ಬೆಟ್ಟದ ನೆಲ್ಲಿಕಾಯಿ ಸೇವಿಸಿ: ಹಲವು ಸಮಸ್ಯೆಗಳಿಗೆ ಗುಡ್ ಬೈ ಹೇಳಿ!

ಸಕ್ಕರೆಯಲ್ಲಿ ಬೆರಸಿ ಬೆಟ್ಟದ ನೆಲ್ಲಿಕಾಯಿ ಸೇವಿಸಿ: ಹಲವು ಸಮಸ್ಯೆಗಳಿಗೆ ಗುಡ್ ಬೈ ಹೇಳಿ!

by Editor
0 comments

ನೆಲ್ಲಿಕಾಯಿ ರಸವನ್ನು ನೀರಿನಲ್ಲಿ ಕದಡಿ, ಶೋಧಿಸಿ, ಸಕ್ಕರೆ ಸೇರಿಸಿ ಪಾನಕ ಮಾಡಿಕೊಂಡು ಕುಡಿದರೆ ಮೂತ್ರದೊಂದಿಗೆ ರಕ್ತ ಹೋಗುತ್ತಿದ್ದರೆ ಬಹುಬೇಗ ಗುಣವಾಗುತ್ತದೆ. ನೆಲ್ಲಿಕಾಯಿಯ ಎಲೆಗಳ ಕಷಾಯ ತಯಾರಿಸಿಕೊಂಡು ಬಾಯಿ ಮುಕ್ಕಳಿಸುತ್ತಿದ್ದರೆ ಹೊಟ್ಟೆ ದೂರವಾಗುವುದು.

ನೆಲ್ಲಿಕಾಯಿಯ ರಸವನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ಪಿತ್ತ, ಹೊಟ್ಟೆನೋವು ಶಮನವಾಗುತ್ತದೆ. ಕೆರೆತ, ತುರಿಕೆ, ಕಜ್ಜಿಯಂತಹ ಸಾಮಾನ್ಯ ಚರ್ಮದ ಸಮಸ್ಯೆಗಳಲ್ಲಿ ಕಿರುನೆಲ್ಲಿಗಿಡವನ್ನು ಜಜ್ಜಿ ಅದರ ರಸವನ್ನು ಹಚ್ಚಿಬೇಕು ಅಲ್ಲದೆ ಗಿಡದ ರಸವನ್ನು ಎರಡು ಚಮಚ ಕುಡಿಯಬೇಕು.

ಹಸಿವು ಆಗದಿರುವಿಕೆ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಿಸಲು ಕಿರುನೆಲ್ಲಿ ಗಿಡದ ರಸವನ್ನು ಸೇವಿಸಬೇಕು. ಬಲಿತ ನೆಲ್ಲಿಕಾಯಿಯ ಚೂರ್ಣವನ್ನು ಬಿಸಿನೀರಿನಲ್ಲಿ ಚೆನ್ನಾಗಿ ಕಿವುಚಿ ಅದಕ್ಕೆ ಸಕ್ಕರೆಯನ್ನು ಸೇರಿಸಿ, ಶೋಧಿಸಿದ ನಂತರ ಸೇವಿಸಿದರೆ ಬಾಯಿ, ಮೂಗು ಮತ್ತು ಗುದದ್ವಾರದಿಂದ ಹೊರಬೀಳುವ ರಕ್ತ ತಟ್ಟನೆ ನಿಲ್ಲುತ್ತದೆ.

ನೆಲ್ಲಿಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ನೆಗಡಿ, ಉಬ್ಬಸ, ಕ್ಷಯ, ಜ್ಞಾಪಕಶಕ್ತಿ ಇಲ್ಲದಿರುವಿಕೆ, ಅಕಾಲಿಕ ಮುಪ್ಪು, ಮಧುಮೇಹ, ಕೂದಲು ಉದುರುವಿಕೆ ಮುಂತಾದ ರೋಗಗಳು ದೂರವಾಗುತ್ತದೆ. ನೆಲ್ಲಿಕಾಯಿಯ ಎಲೆಯನ್ನು ಮಜ್ಜಿಗೆಯಲ್ಲಿ ಅರೆದು ಅದರಲ್ಲೇ ಕದಡಿ, ಸೋಸಿ ದಿನಕ್ಕೆರಡು ಬಾರಿ ಕುಡಿದರೆ ಬೇಧಿ ನಿಲ್ಲುತ್ತದೆ. ನೆಲ್ಲಿಕಾಯಿಯ ಬೀಜ ತೆಗದು ರುಬ್ಬಿ ತಲೆಗೆ ಸವರಿ ಎರಡು ಗಂಟೆ ಬಿಟ್ಟು ಸ್ನಾನ ಮಾಡಲು ಒಳಕೂದಲು ಕಪ್ಪಾಗುವುದು.

banner

ಒಂದು ಚಮಚ ನೆಲ್ಲಿಕಾಯಿಯ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪದೊಂದಿಗೆ ಪ್ರತಿದಿನ ಬೆಳಗಿನ ಸಮಯದಲ್ಲಿ ಸೇವಿಸುದರಿಂದ ‘ಸೀ’ ಜೀವಸತ್ವದ ಕೊರತೆಯಿಂದ ಉಂಟಾಗುವ ಸಮಸ್ಯೆ ನಿವಾರಣೆಯಾಗುತ್ತದೆ. ಕೂದಲು ಸೋಂಪಾಗಿ ಬೆಳೆಯಲು ನೆಲ್ಲಿಕಾಯಿಯ ರಸದೊಡನೆ ಎಲಚಿ ಎಲೆಗಳನ್ನು ಅರೆದು ಅದನ್ನು ತಲೆಗೆ ಹಚ್ಚಿಕೊಳ್ಳಿ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಾಹನ ಸವಾರರಿಗೆ ಬಿಗ್ ಶಾಕ್: ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ! ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ