Friday, October 4, 2024
Google search engine
Homeಜಿಲ್ಲಾ ಸುದ್ದಿಚಾಮರಾಜನಗರ ಬಿಳಿಗಿರಿ ರಂಗನಾಥ ದೇವಸ್ಥಾನಕ್ಕೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕುಟುಂಬ ಭೇಟಿ

ಚಾಮರಾಜನಗರ ಬಿಳಿಗಿರಿ ರಂಗನಾಥ ದೇವಸ್ಥಾನಕ್ಕೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕುಟುಂಬ ಭೇಟಿ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕುಟುಂಬ ಸಮೇತರಾಗಿ ಚಾಮರಾಜನಗರದ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಚಾಮರಾಜನಗರದ ಪ್ರಖ್ಯಾತ ಬಿಳಿಗಿರಿರಂಗನ ಬೆಟ್ಟ, ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿ ನೀಡಿದ ಡಿವೈ ಚಂದ್ರಚೂಡ್ ಕುಟುಂಬ ಪೂಜೆ ಸಲ್ಲಿಸಿದ್ದಾರೆ.

ಯಳಂದೂರು ತಾಲೂಕಿನ ಖ್ಯಾತ ಯಾತ್ರಾ ಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥನಿಗೆ ವಿಶೇಷ ಪೂಜೆ, ಅರ್ಚನೆ ಮಾಡಿಸಿದರು. ಬಳಿಕ, ಬಿಳಿಗಿರಿರಂಗನ ಬೆಟ್ಟದಿಂದ ಕೆ.ಗುಡಿಗೆ ಭೇಟಿ ನೀಡಿದ ಅರಣ್ಯ ಸೌಂದರ್ಯ ಸವಿದರು.

ಚಾಮರಾಜನಗರದ ಹರಳುಕೋಟೆ ಆಂಜನೇಯ ಸನ್ನಿಧಿಗೆ ಭೇಟಿ ನೀಡಿ ಹನುಮನ ದರ್ಶನ ಪಡೆದು ಅರ್ಚನೆ ಮಾಡಿಸಿದರು. ಹರಳುಕೋಟೆ ಆಂಜನೇಯಸ್ವಾಮಿ ದೇಗುಲವು ಬಬ್ರುವಾಹನನಿಂದ ಸ್ಥಾಪಿತಗೊಂಡ ಮೂರ್ತಿ ಎಂಬ ನಂಬಿಕೆ ಇದ್ದು ಪುರಾಣ ಐತಿಹ್ಯ ಹಾಗೂ ಇತಿಹಾಸ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments