Saturday, July 6, 2024
Google search engine
Homeತಾಜಾ ಸುದ್ದಿತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಅರೆಸ್ಟ್!

ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಅರೆಸ್ಟ್!

ನಾಟಕೀಯ ಬೆಳವಣಿಗೆಯೊಂದರಲ್ಲಿ ಭಾರತ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಮತ್ತು ತೆಲಂಗಾಣ ಮಾಜಿ ಸಿಎಂ ಕೆ. ಚಂದ್ರಶೇಖರ್ ರಾವ್ ಪುತ್ರಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ. ಕವಿತಾ ಅವರನ್ನು ಹೈದರಾಬಾದ್ ಮನೆಯಲ್ಲಿ ಬಂಧಿಸಲಾಗಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಮದ್ಯ ನಿಯಮದ ಪ್ರಕರಣದಲ್ಲಿ ಕವಿತಾ ಅವರನ್ನು ಬಂಧಿಸಿ ದೆಹಲಿಗೆ ಕರೆದೊಯ್ದಿದ್ದು, ನಾಳೆ ವಿಚಾರಣೆ ಆರಂಭಿಸಲಿದ್ದಾರೆ.

ಕಳೆದ ವರ್ಷ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು. ಆದರೆ ಈ ವರ್ಷ ಎರಡು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಏಕಾಏಕಿ ದಾಳಿ ನಡೆಸಿದ ಇಡಿ ಅಧಿಕಾರಿಗಳು ಕವಿತಾ ಅವರನ್ನು ಬಂಧಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments