Saturday, July 27, 2024
Google search engine
Homeಜಿಲ್ಲಾ ಸುದ್ದಿಮೈಸೂರಿನಲ್ಲಿ ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ದುರ್ಮರಣ

ಮೈಸೂರಿನಲ್ಲಿ ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ದುರ್ಮರಣ

ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಆಘಾತಕಾರಿ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭವಿಸಿದೆ.

ಮೈಸೂರಿನ ಯರಗಾನಹಳ್ಳಿಯಲ್ಲಿ ಬುಧವಾರ ಈ ದುರ್ಘಟನೆ ಸಂಭವಿಸಿದ್ದು, ದಂಪತಿ ಕುಮಾರಸ್ವಾಮಿ (45), ಮಂಜುಳಾ, (39) ಪುತ್ರಿಯರಾದ ಅರ್ಚನಾ (19) ಮತ್ತು ಸ್ವಾತಿ (17) ಮೃತಪಟ್ಟ ದುರ್ದೈವಿಗಳು.

ಬಟ್ಟೆ ಐರನ್ ಮಾಡಿ ಜೀವನ ಮಾಡುತ್ತಿದ್ದ ಕುಟುಂಬ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯರಗಾನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments