Saturday, July 6, 2024
Google search engine
Homeಜಿಲ್ಲಾ ಸುದ್ದಿಪ್ರವಾಸಕ್ಕೆ ಬಂದಿದ್ದ ಮೈಸೂರಿನ ನಾಲ್ವರು ಮುತ್ತತ್ತಿಯಲ್ಲಿ ಕಾವೇರಿ ಪಾಲು

ಪ್ರವಾಸಕ್ಕೆ ಬಂದಿದ್ದ ಮೈಸೂರಿನ ನಾಲ್ವರು ಮುತ್ತತ್ತಿಯಲ್ಲಿ ಕಾವೇರಿ ಪಾಲು

ಪ್ರವಾಸಕ್ಕೆ ಬಂದಿದ್ದ ಸ್ನೇಹಿತರು ಹಾಗೂ ಕುಟುಂಬದವರ ಪೈಕಿ ನಾಲ್ವರು ಮುತ್ತತ್ತಿಯಲ್ಲಿ ಈಜಲು ಹೋಗಿ ಕಾವೇರಿ ನದಿ ಪಾಲಾಗಿದ್ದಾರೆ.

ದುರಂತದಲ್ಲಿ ತಂದೆ ನಾಗೇಶ್ (40), ಮಗ ಭರತ್ (17) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹ ಪತ್ತೆ, ಮತ್ತಿಬ್ಬರ ಶವಕ್ಕಾಗಿ ಹುಡುಕಾಟ ನಡೆಯುತ್ತಿದ್ದು ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ.

ಮೈಸೂರಿನ ಕನಕಗಿರಿಯಿಂದ ಮಳವಳ್ಳಿ ತಾಲೂಕಿನ ಮುತ್ತತ್ತಿಗೆ ಒಂದೇ ಬಸ್‌ನಲ್ಲಿ ಕುಟುಂಬಸ್ಥರು ಮತ್ತು ಸ್ನೇಹಿತರು ಸೇರಿ 40 ಮಂದಿ ಪ್ರವಾಸ ಬಂದಿದ್ದರು. ನದಿಯಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments