Home ಕ್ರೀಡೆ ಭಾರತ ತಂಡದ ಕೋಚ್ ರೇಸ್ ನಿಂದ ಹಿಂದೆ ಸರಿದ ಗೌತಮ್ ಗಂಭೀರ್?

ಭಾರತ ತಂಡದ ಕೋಚ್ ರೇಸ್ ನಿಂದ ಹಿಂದೆ ಸರಿದ ಗೌತಮ್ ಗಂಭೀರ್?

by Editor
0 comments

ರಾಹುಲ್ ದ್ರಾವಿಡ್ ನಿರ್ಗಮನದ ನಂತರ ತೆರವಾಗಲಿರುವ ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನದ ಸ್ಪರ್ಧೆಯಿಂದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹಿಂದೆ ಸರಿದ ಸುಳಿವು ನೀಡಿದ್ದಾರೆ.

ಕೋಲ್ಕತಾ ನೈಟ್‍ ರೈಡರ್ಸ್ 3ನೇ ಬಾರಿ ಪ್ರಶಸ್ತಿ ಗೆದ್ದ ನಂತರ ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಕೋಚ್ ಆಗಲಿದ್ದಾರೆ ಎಂಬ ವದಂತಿ ಹರಡಿತ್ತು. ಬಿಸಿಸಿಐ ಕಾರ್ಯದರ್ಶಿ ಜೈ ಶಾ ಭೇಟಿ ನೀಡಿ ಮಾತುಕತೆ ನಡೆಸಿದ್ದು ಇದಕ್ಕೆ ಇಂಬು ನೀಡಿತ್ತು.

ಕೆಕೆಆರ್ ಪ್ರಶಸ್ತಿ ಗೆಲ್ಲುತ್ತಿದ್ದಂತೆ ಬಾಲಿವುಡ್ ನಟ ಹಾಗೂ ಮಾಲೀಕ ಶಾರೂಖ್ ಖಾನ್ ಗೌತಮ್ ಗಂಭೀರ್ ಗೆ ಖಾಲಿ ಚೆಕ್ ನೀಡಿ 10 ವರ್ಷ ಕೋಚ್ ಆಗಿ ಮುಂದುವರಿಯಲು ಆಹ್ವಾನ ನೀಡಿದ್ದರು. ಮಂಗಳವಾರ ಸುಮಾರು 5 ಗಂಟೆಗಳ ಕಾಲ ಮುಂಬೈನ ಶಾರೂಖ್ ಖಾನ್ ಮನೆಯಲ್ಲಿ ಭೇಟಿ ಮಾಡಿದ್ದ ಗಂಭೀರ್ ಸುದೀರ್ಘ ಮಾತುಕತೆ ನಡೆಸಿದ್ದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ನಾನು ಮಾಧ್ಯಮಗಳ ಕಣ್ಣಿಗೆ ಗುರಿಯಾಗಿದ್ದೇನೆ. ಕೆಕೆಆರ್ ಪ್ರಶಸ್ತಿ ಗೆದ್ದ ನಂತರ ಈ ಕುತೂಹಲ ಹೆಚ್ಚಾಗಿದೆ. ಆದರೆ ಕೆಕೆಆರ್ 3 ಬಾರಿ ಐಪಿಎಲ್ ಚಾಂಪಿಯನ್ ಆಗಿದ್ದರೂ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮಾದರಿಯಲ್ಲಿ ಯಶಸ್ವಿ ತಂಡವಾಗಿ ಗುರುತಿಸಿಕೊಂಡಿಲ್ಲ. ಆದ್ದರಿಂದ ಕೆಕೆಆರ್ ಇನ್ನೂ ಮೂರು ಬಾರಿಯಾದರೂ ಪ್ರಶಸ್ತಿ ಗೆಲ್ಲಬೇಕಿದೆ ಎಂದರು.

banner

ಸದ್ಯ ನನ್ನ ಗುರಿ ಕೆಕೆಆರ್ ಇನ್ನಷ್ಟು ಯಶಸ್ವಿಯಾಗಿ ಮುನ್ನಡೆಸುವುದಾಗಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಯೋಜನೆ ಹಾಗೂ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ. ಮುಂದೆ ಸಾಕಷ್ಟು ಅವಕಾಶಗಳು ಇರುವುದರಿಂದ ಕೆಕೆಆರ್ ಅನ್ನು ಮತ್ತಷ್ಟು ಬಲಿಷ್ಠ ತಂಡವಾಗಿ ರೂಪಿಸುವತ್ತ ಗಮನ ಹರಿಸಲಿದ್ದೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಭಾರತ ತಂಡದ ಕೋಚ್ ಸ್ಥಾನದ ರೇಸ್ ನಿಂದ ಹಿಂದೆ ಸರಿದಿದ್ದಾಗಿ ಗಂಭೀರ್ ಹೇಳಿದರು.

ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನಕ್ಕೆ ಕರೆಯಲಾಗಿದ್ದ ಅರ್ಜಿ ಆಹ್ವಾನದ ಗಡುವು ಮುಗಿದಿದೆ. ಅಲ್ಲದೇ ವಿದೇಶೀ ಕೋಚ್ ನೇಮಕ ಕುರಿತು ಬಿಸಿಸಿಐ ನಿರಾಸಕ್ತಿ ಹೊಂದಿರುವುದಾಗಿ ಈಗಾಗಲೇ ಹೇಳಿಕೆ ನೀಡಿದ್ದು, ಇದೀಗ ಹೊಸ ಕೋಚ್ ಯಾರಾಗುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಷೇರು ಮಾರುಕಟ್ಟೆ: 4 ದಿನದಲ್ಲಿ ಹೂಡಿಕೆದಾರರಿಗೆ 24.69 ಲಕ್ಷ ಕೋಟಿ ರೂ. ನಷ್ಟ! 4 ಮಕ್ಕಳನ್ನು ಹೆತ್ತರೆ 1 ಲಕ್ಷ ರೂ. ಬಹುಮಾನ: ಬ್ರಾಹ್ಮಣ ಮಂಡಳಿ ಘೋಷಣೆ ರಾಜ್ಯ ಸರ್ಕಾರದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ! ಗೋವುಗಳ ಕೆಚ್ಚಲು ಕೊಯ್ದು ವಿಕೃತಿ: ಪರಿಸರವಾದಿಗಳಿಂದ ಮೇಣಬತ್ತಿ ಹಚ್ಚಿ ಪ್ರತಿಭಟನೆ Austrelian Open: 19 ವರ್ಷದ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ ಜಪಾನ್ ನಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ 3 ಐಎನ್ ಎಸ್ ಯುದ್ಧ ನೌಕೆಗಳನ್ನು ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ! ಖಾತಾ ಇಲ್ಲದ ಆಸ್ತಿಗಳಿಗಾಗಿ ಬಿಬಿಎಂಪಿಯಿಂದ ವೆಬ್ ಸೈಟ್ ಬಿಡುಗಡೆ: ಖಾತಾ ಪಡೆಯುವ ವಿಧಾನ ಇಲ್ಲಿದೆ! ನೇಮಕಾತಿಯ ಮೆಸೇಜ್ ಸುಳ್ಳು, ನಂಬಬೇಡಿ: ಸಣ್ಣ ನೀರಾವರಿ ಇಲಾಖೆ ಸ್ಪಷ್ಟನೆ 2024ರಲ್ಲಿ ಹತ್ಯೆಯಾದ ಉಗ್ರರಲ್ಲಿ ಶೇ.60ರಷ್ಟು ಪಾಕಿಸ್ತಾನಿಯರು: ಸೇನಾ ಮುಖ್ಯಸ್ಥ ಉಪೇಂದ್ರ!