Thursday, September 19, 2024
Google search engine
Homeತಾಜಾ ಸುದ್ದಿಮೆಂಟಲ್ ಆಸ್ಪತ್ರೆಗೆ ಹೋಗ್ತೀನಿ, ಡಿಕೆಶಿ ಯಾವ ಜಾಗಕ್ಕೆ ಹೋಗ್ತಾರೆ ನೋಡೋಣ: ಕುಮಾರಸ್ವಾಮಿ ಬಾಂಬ್

ಮೆಂಟಲ್ ಆಸ್ಪತ್ರೆಗೆ ಹೋಗ್ತೀನಿ, ಡಿಕೆಶಿ ಯಾವ ಜಾಗಕ್ಕೆ ಹೋಗ್ತಾರೆ ನೋಡೋಣ: ಕುಮಾರಸ್ವಾಮಿ ಬಾಂಬ್

ನಾನು ಮೆಂಟಲ್ ಆಸ್ಪತ್ರೆಗೆ ಹೋಗ್ತಿನಿ. ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭಾನುವಾರ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು ಡಿಕೆ ಶಿವಕುಮಾರ್ ವಿರುದ್ಧ ಹೊಸ ಬಾಂಬ್ ಸಿಡಿಸಿದರು.

ಯಾರು ಮೆಂಟಲ್ ಆಸ್ಪತ್ರೆಗೆ ಹೋಗುತ್ತಾರೆ ನೋಡೋಣ ಬನ್ನಿ. ನಾವು ಮೆಂಟಲ್ ಆಸ್ಪತ್ರೆಗೆ ಹೋಗಿ ಟ್ರೀಟ್ಮೆಂಟ್ ತಗೆದುಕೊಳ್ಳಬಹುದು‌, ಆದರೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಬನ್ನಿ‌‌ ಎಂದು ಅವರು ಮಾರ್ಮಿಕವಾಗಿ ಹೇಳಿದರು.

ಆ ವ್ಯಕ್ತಿಯ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯ ಇಲ್ಲ. ಪಾದಯಾತ್ರೆ ಮುಕ್ತಾಯ ಮಾಡಿದ್ದೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ಇರುತ್ತದೆ. ಪಾದಯಾತ್ರೆ ಯಶಸ್ಸು ಸಹಿಸಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಲೂಟಿ ಮಾಡಿಕೊಂಡು ಸಾಗುತ್ತಿದೆ ಸರಕಾರ. ನಮ್ಮ ಬಗ್ಗೆ ಸಹಿಷ್ಣುತೆ ಇಲ್ಲದೆ ವ್ಯಕ್ತಿಗತ ಟೀಕೆ ಮಾಡುತ್ತಿದ್ದಾರೆ. ಜನರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಜನಜಾಗೃತಿ ಮೂಡಿಸಲು ನಾವು ಪಾದಯಾತ್ರೆ ಮಾಡಿದ್ದು. ಈ ಸರ್ಕಾರದ ಭ್ರಷ್ಟಾಚಾರವನ್ನು ತಿಳಿಸಲು ಪಾದಯಾತ್ರೆ ಮಾಡಿದ್ದೇವೆ. ಮುಂದೆ ಕಾನೂನು ರೀತಿಯ ಹೋರಾಟವನ್ನೂ ನಡೆಸುತ್ತೇವೆ. ಕರ್ನಾಟಕದ ಖಜಾನೆ ಸದಾ ತುಂಬಿರುತ್ತದೆ. ಈ ಖಜಾನೆಯನ್ನು ಈ ಸರಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರಕಾರ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ಇಲ್ಲಿ ಸಿಎಂ ಕುರ್ಚಿ ಅಲ್ಲಾಡುತ್ತಿಲ್ಲ, ಕುರ್ಚಿಯಲ್ಲಿ ಕೂತವರು ಅಲ್ಲಾಡುತ್ತಿದ್ದಾರೆ ಅಷ್ಟೇ. ರಾಜ್ಯದ ಅಧಕಾರದ ಕುರ್ಚಿ ಭದ್ರವಾಗಿಯೇ ಇರುತ್ತದೆ. ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧ ಕುರ್ಚಿ ಗಟ್ಟಿಯಾಗಿದೆ. ಕುರ್ಚಿಯಲ್ಲಿ‌ ಕೂರೋರು ಭದ್ರವಾಗಿ ಇರೋಕೆ ಆಗಲ್ಲ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments