Sunday, September 8, 2024
Google search engine
Homeಜಿಲ್ಲಾ ಸುದ್ದಿದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಎಚ್.ಡಿ. ರೇವಣ್ಣ, ಆಸ್ಪತ್ರೆಗೆ ದಾಖಲು

ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಎಚ್.ಡಿ. ರೇವಣ್ಣ, ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಎಚ್.ಡಿ. ರೇವಣ್ಣ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಪಕ್ಕೆಲುಬಿಗೆ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಆಷಾಢ ಏಕದಾಶಿ ಪ್ರಯುಕ್ತ ಉಪವಾಸ ಇದ್ದ ರೇವಣ್ಣ ಬುಧವಾರ ಹೊಳೆನರಸೀಪುರದ ಹರದನಹಳ್ಳಿಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ತೆರಳಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಾಲುಜಾರಿ ಬಿದ್ದಿದ್ದಾರೆ.

ರೇವಣ್ಣ ಕೆಳಗೆ ಬಿದ್ದಿದ್ದರಿಂದ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಎಚ್.ಡಿ. ರೇವಣ್ಣ ಮೊಹರಂ ರಜೆ ಪ್ರಯುಕ್ತ ಹಾಸನಕ್ಕೆ ಮರಳಿದ್ದರು. ನಿನ್ನೆ ನಡೆದ ಕಲಾಪದಲ್ಲಿ ಪ್ರಜ್ವಲ್ ರೇವಣ್ಣ ವಿಷಯ ಪ್ರಸ್ತಾಪವಾಗಿದ್ದು, ಮಗ ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ ಎಂದು ವಾದಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments