Home ಕಾನೂನು ಗುಜರಾತ್ ಸರ್ಕಾರವನ್ನು ನಂಬಲ್ಲ: ಹೈಕೋರ್ಟ್ ಛೀಮಾರಿ

ಗುಜರಾತ್ ಸರ್ಕಾರವನ್ನು ನಂಬಲ್ಲ: ಹೈಕೋರ್ಟ್ ಛೀಮಾರಿ

by Editor
0 comments
fire accident

ಗುಜರಾತ್ ಸರ್ಕಾರವನ್ನು ನಾವು ಈಗ ನಂಬುವುದಿಲ್ಲ ಎಂದು ರಾಜ್ ಕೋಟ್ ನ ಕ್ರೀಡಾ ವಲಯದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ಛೀಮಾರಿ ಹಾಕಿದೆ.

ರಾಜ್ ಕೋಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 9 ಮಕ್ಕಳು ಸೇರಿದಂತೆ 28 ಮಂದಿ ಮೃತಪಟ್ಟಿದ್ದು, ಹಲವು ದೇಹಗಳನ್ನು ಗುರುತಿಸಲಾಗದಷ್ಟು ಕರಕಲಾಗಿವೆ. ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಎರಡನೇ ಅಗ್ನಿ ದುರಂತ ಇದಾಗಿದೆ.

ನಗರದಲ್ಲಿ ಸಂಭವಿಸಿದ ಎರಡೂ ಅಗ್ನಿ ದುರಂತ ಪ್ರಕರಣಗಳಲ್ಲಿ ಯಾವುದೇ ಸುರಕ್ಷತಾ ಮಾನದಂಡ ಅನುಸರಿಸಲಾಗಿಲ್ಲ. ಅಲ್ಲದೇ ಸಂಬಂಧಪಟ್ಟ ಇಲಾಖೆಗಳಿಂದ ಪ್ರಮಾಣಪತ್ರ ಪಡೆಯದೇ 24 ತಿಂಗಳಿಂದ ಕಾರ್ಯಚರಿಸುತ್ತಿದ್ದವು.

ಪರವಾನಗಿ ಪಡೆಯದೇ ಸಂಸ್ಥೆ ನಡೆಸಲಾಗುತ್ತಿತ್ತು ಎಂದು ಸ್ಥಳೀಯ ಸಂಸ್ಥೆಗಳ ವರದಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆಡಳಿತದ ಗುಜರಾತ್ ಸರ್ಕಾರದ ಆಡಳಿತವನ್ನು ನಾವು ಇನ್ನೂ ನಂಬುವುದಿಲ್ಲ ಎಂದು ಖಾರವಾಗಿ ಹೇಳಿದೆ.

banner

ಸುಮಾರು ಎರಡೂವರೆ ವರ್ಷದಿಂದ ಯಾವುದೇ ಪರವಾನಗಿ ಇಲ್ಲದೇ ನಡೆಯುತ್ತಿತ್ತು ಎಂದರೇ ನಂಬಲು ಸಾಧ್ಯವೇ? ನಿಮ್ಮ ಸರ್ಕಾರ ಹಾಗೂ ಬೆಂಬಲಿಗರು ಏನು ಮಾಡುತ್ತಿದ್ದವು. ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದರೂ ಎಲ್ಲರೂ ಕಣ್ಮುಚ್ಚಿ ಕುಳಿತಿದ್ದರಾ ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಇದೇ ವೇಳೆ ರಾಜ್ಯ ಸರ್ಕಾರವನ್ನು ಮುಲಾಜಿಲ್ಲದೇ ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ನೀವು ಏನು ಕಣ್ಮುಚ್ಚಿ ಕುಳಿತಿದ್ದಿರಾ? ಅಥವಾ ನಿದ್ದೆ ಮಾಡುತ್ತಿದ್ದಿರಾ? ನಿಮ್ಮ ಆಡಳಿತ ವ್ಯವಸ್ಥೆಯ ಮೇಲೆ ಯಾರೂ ನಂಬಿಕೆ ಇಟ್ಟುಕೊಳ್ಳುವಂತಿಲ್ಲ ಎಂದು ಕೋರ್ಟ್ ಹೇಳಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಸಾಮೂಹಿಕ ಅತ್ಯಾಚಾರ ಎಸಗಿದ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಎಫ್ ಐಆರ್ ದಾಖಲು! ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ! ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟ! ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ, ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ದಲಿತ ಅಥ್ಲೀಟ್ ಮೇಲೆ 65 ಜನರಿಂದ ಅತ್ಯಾಚಾರ: 44 ಮಂದಿ ಬಂಧನ