Sunday, September 8, 2024
Google search engine
Homeಜಿಲ್ಲಾ ಸುದ್ದಿರಾಮನಗರದಲ್ಲಿ ಅಮಾನವೀಯ ಘಟನೆ: 2 ಜಡೆ ಹಾಕಲಿಲ್ಲ ಅಂತ 3 ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕ!

ರಾಮನಗರದಲ್ಲಿ ಅಮಾನವೀಯ ಘಟನೆ: 2 ಜಡೆ ಹಾಕಲಿಲ್ಲ ಅಂತ 3 ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕ!

ಎರಡು ಜಡೆ ಹಾಕಿಕೊಂಡು ಬಂದಿಲ್ಲ ಅಂತ ಶಿಕ್ಷಕರೊಬ್ಬರು ಮೂವರು ವಿದ್ಯಾರ್ಥಿನಿಯರ ತಲೆಕೂದಲು ಕತ್ತರಿಸಿದ ಅಮಾನವೀಯ ಘಟನೆ ಬೆಂಗಳೂರು ನೆರೆಯ ಜಿಲ್ಲೆಯಾದ ರಾಮನಗದಲ್ಲಿ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 8ನೇ ತರಗತಿ ವಿದ್ಯಾರ್ಥಿನಿಯರಾದ ಅಮೂಲ್ಯ, ಅನುಷಾ ಮತ್ತು ಭಾವನಾ ಅವರ ಕೂದಲು ಕತ್ತರಿಸಲಾಗಿದೆ. ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಸೂಚನೆ ಮೇರೆಗೆ ಶಿಕ್ಷಕಿ ಪವಿತ್ರಾ ಕೂದಲು ಕತ್ತರಿಸಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ.

ಶಾಲೆಯಿಂದ ಮರಳಿದ ವಿದ್ಯಾರ್ಥಿನಿಯರ ಕೂದಲು ಕತ್ತರಿಸಿಸುವುದು ಪೋಷಕರ ಗಮನಕ್ಕೆ ಬಂದಿದ್ದು, ಮಕ್ಕಳನ್ನು ಪ್ರಶ್ನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆಗೆ ಬಂದು ಗಲಾಟೆ ಮಾಡಿದಾಗ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments