Home ಕ್ರೀಡೆ IPL 2024: ಬುಮ್ರಾ ದಾಳಿಗೆ ಕುಸಿದ ಆರ್ ಸಿಬಿಗೆ ಮೂವರು ಅರ್ಧಶತಕದ ಆಸರೆ!

IPL 2024: ಬುಮ್ರಾ ದಾಳಿಗೆ ಕುಸಿದ ಆರ್ ಸಿಬಿಗೆ ಮೂವರು ಅರ್ಧಶತಕದ ಆಸರೆ!

by Editor
0 comments

ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ದಾಳಿ ನಡುವೆಯೂ ನಾಯಕ ಸೇರಿದಂತೆ ಮೂವರು ಆಟಗಾರರು ಅರ್ಧಶತಕಗಳನ್ನು ಸಿಡಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆ ಪೈಪೋಟಿಯ ಮೊತ್ತದ ಸವಾಲೊಡ್ಡುವಲ್ಲಿ ಯಶಸ್ವಿಯಾಗಿದೆ.

ಮುಂಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆ ಹಾಕಿತು.

ಅದ್ಭುತ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ (3) ವಿಫಲರಾಗಿ ನಿರಾಸೆ ಮೂಡಿಸಿದರು. ನಂತರ ಬಂದ ವಿಲ್ ಜಾಕ್ಸ್ (8) ಕೂಡ ಬೇಗನೇ ನಿರ್ಗಮಿಸಿದ್ದರಿಂದ ತಂಡ ಆಘಾತಕ್ಕೆ ಒಳಗಾಯಿತು.

ಮೂರನೇ ವಿಕೆಟ್ ಗೆ ಜೊತೆಯಾದ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ರಜತ್ ಪಟಿದಾರ್ 82 ರನ್ ಜೊತೆಯಾಟದಿಂದ ತಂಡವನ್ನು ಆಧರಿಸಿದರು. ಫಾಫ್ ಡು ಪ್ಲೆಸಿಸ್ 40 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 61 ರನ್ ಬಾರಿಸಿದರೆ, ರಜತ್ 26 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 50 ರನ್ ಬಾರಿಸಿ ನಿರ್ಗಮಿಸಿದರು.

banner

ಈ ಹಂತದಲ್ಲಿ ಮಾರಕ ದಾಳಿ ನಡೆಸಿದ ಜಸ್ ಪ್ರೀತ್ ಬುಮ್ರಾ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬೆನ್ನುಲುಬು ಮುರಿದರು. ಅಲ್ಲದೇ 5 ವಿಕೆಟ್ ಗೊಂಚಲು ಪಡೆದ ಸಾಧನೆ ಮಾಡಿದರು.

ಮತ್ತೊಂದೆಡೆ ಫಿನಿಷರ್ ಪಾತ್ರದಲ್ಲಿ ಮಿಂಚುತ್ತಿರುವ ದಿನೇಶ್ ಕಾರ್ತಿಕ್ 23 ಎಸೆತಗಳಲ್ಲಿ 5 ಬೌಂಡರಿ ಮತ್ತು 4 ಸಿಕ್ಸರ್ ಸಿಡಿಸಿ ಅರ್ಧಶತಕ (53) ಸಿಡಿಸಿ ತಂಡದ ಮೊತ್ತವನ್ನು 200ರ ಗಡಿ ಸಮೀಪ ಕೊಂಡೊಯ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಷೇರು ಮಾರುಕಟ್ಟೆ: 4 ದಿನದಲ್ಲಿ ಹೂಡಿಕೆದಾರರಿಗೆ 24.69 ಲಕ್ಷ ಕೋಟಿ ರೂ. ನಷ್ಟ! 4 ಮಕ್ಕಳನ್ನು ಹೆತ್ತರೆ 1 ಲಕ್ಷ ರೂ. ಬಹುಮಾನ: ಬ್ರಾಹ್ಮಣ ಮಂಡಳಿ ಘೋಷಣೆ ರಾಜ್ಯ ಸರ್ಕಾರದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ! ಗೋವುಗಳ ಕೆಚ್ಚಲು ಕೊಯ್ದು ವಿಕೃತಿ: ಪರಿಸರವಾದಿಗಳಿಂದ ಮೇಣಬತ್ತಿ ಹಚ್ಚಿ ಪ್ರತಿಭಟನೆ Austrelian Open: 19 ವರ್ಷದ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ ಜಪಾನ್ ನಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ 3 ಐಎನ್ ಎಸ್ ಯುದ್ಧ ನೌಕೆಗಳನ್ನು ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ! ಖಾತಾ ಇಲ್ಲದ ಆಸ್ತಿಗಳಿಗಾಗಿ ಬಿಬಿಎಂಪಿಯಿಂದ ವೆಬ್ ಸೈಟ್ ಬಿಡುಗಡೆ: ಖಾತಾ ಪಡೆಯುವ ವಿಧಾನ ಇಲ್ಲಿದೆ! ನೇಮಕಾತಿಯ ಮೆಸೇಜ್ ಸುಳ್ಳು, ನಂಬಬೇಡಿ: ಸಣ್ಣ ನೀರಾವರಿ ಇಲಾಖೆ ಸ್ಪಷ್ಟನೆ 2024ರಲ್ಲಿ ಹತ್ಯೆಯಾದ ಉಗ್ರರಲ್ಲಿ ಶೇ.60ರಷ್ಟು ಪಾಕಿಸ್ತಾನಿಯರು: ಸೇನಾ ಮುಖ್ಯಸ್ಥ ಉಪೇಂದ್ರ!