Home ಕ್ರೀಡೆ ಜಾಕ್ಸ್ 2ನೇ ಅತೀ ವೇಗದ ಶತಕ: ಕೊಹ್ಲಿ ಮಿಂಚು: ಆರ್ ಸಿಬಿಗೆ 9 ವಿಕೆಟ್ ಭರ್ಜರಿ ಜಯ

ಜಾಕ್ಸ್ 2ನೇ ಅತೀ ವೇಗದ ಶತಕ: ಕೊಹ್ಲಿ ಮಿಂಚು: ಆರ್ ಸಿಬಿಗೆ 9 ವಿಕೆಟ್ ಭರ್ಜರಿ ಜಯ

by Editor
0 comments

ವಿಲ್ ಜಾಕ್ಸ್ ಅಜೇಯ ಶತಕ ಹಾಗೂ ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳ ಭಾರೀ ಅಂತರದಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ.

ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು. ಬೃಹತ್ ಮೊತ್ತ ಬೆಂಬತ್ತಿದ ಆರ್ ಸಿಬಿ 16 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನಿಭಾಯಿಸುತ್ತಿದ್ದರು. ಆದರೆ ಪಂದ್ಯದ ಆಕರ್ಷಣೆ ಆಗಿದ್ದು, ವಿಲ್ ಜಾಕ್ಸ್. ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ಪ್ರದರ್ಶನ ನೀಡದ ವಿಲ್ ಜಾಕ್ಸ್ ಸಿಡಿಲಬ್ಬರದ ಬ್ಯಾಟಿಂಗ್ ನಿಂದ ಪಂದ್ಯದ ಚಿತ್ರಣವನ್ನೇ ಬದಲಿಸಿದರು. ಅದರಲ್ಲೂ ಕೊನೆಯ 2 ಓವರ್ ಗಳಲ್ಲಿ 57 ರನ್ ದೋಚುವ ಮೂಲಕ ಶತಕ ಗಳಿಸಿದರು.

ಜಾಕ್ಸ್ 41 ಎಸೆತಗಳಲ್ಲಿ 5 ಬೌಂಡರಿ ಮತ್ತು 10 ಸಿಕ್ಸರ್ ಸಿಡಿಸಿ ಬರೋಬ್ಬರಿ ಶತಕ ಗಳಿಸಿ ಮಿಂಚು ಹರಿಸಿದರೆ, ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 70 ರನ್ ಬಾರಿಸಿ ಔಟಾಗದೇ ಉಳಿದರು.

banner

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ಸಾಯಿ ಸುದರ್ಶನ್ ಮತ್ತು ಶಾರೂಖ್ ಖಾನ್ ಅವರ ಅರ್ಧಶತಕಗಳ ನೆರವಿನಿಂದ ಬೃಹತ್ ಮೊತ್ತ ದಾಖಲಿಸಿತು.

ಸಾಯಿ ಸುದರ್ಶನ್ 49 ಎಸೆತಗಳಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 84 ರನ್ ಸಿಡಿಸಿದರೆ, ಶಾರೂಖ್ ಖಾನ್ 30 ಎಸೆತಗಳಲ್ಲಿ 3 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 58 ರನ್ ಚಚ್ಚಿದರು. ಇವರಿಬ್ಬರು ಮೂರನೇ ವಿಕೆಟ್ ಗೆ 104 ರನ್ ಜೊತೆಯಾಟದಿಂದ ತಂಡವನ್ನು ಮುನ್ನಡೆಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಷೇರು ಮಾರುಕಟ್ಟೆ: 4 ದಿನದಲ್ಲಿ ಹೂಡಿಕೆದಾರರಿಗೆ 24.69 ಲಕ್ಷ ಕೋಟಿ ರೂ. ನಷ್ಟ! 4 ಮಕ್ಕಳನ್ನು ಹೆತ್ತರೆ 1 ಲಕ್ಷ ರೂ. ಬಹುಮಾನ: ಬ್ರಾಹ್ಮಣ ಮಂಡಳಿ ಘೋಷಣೆ ರಾಜ್ಯ ಸರ್ಕಾರದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ! ಗೋವುಗಳ ಕೆಚ್ಚಲು ಕೊಯ್ದು ವಿಕೃತಿ: ಪರಿಸರವಾದಿಗಳಿಂದ ಮೇಣಬತ್ತಿ ಹಚ್ಚಿ ಪ್ರತಿಭಟನೆ Austrelian Open: 19 ವರ್ಷದ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ ಜಪಾನ್ ನಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ 3 ಐಎನ್ ಎಸ್ ಯುದ್ಧ ನೌಕೆಗಳನ್ನು ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ! ಖಾತಾ ಇಲ್ಲದ ಆಸ್ತಿಗಳಿಗಾಗಿ ಬಿಬಿಎಂಪಿಯಿಂದ ವೆಬ್ ಸೈಟ್ ಬಿಡುಗಡೆ: ಖಾತಾ ಪಡೆಯುವ ವಿಧಾನ ಇಲ್ಲಿದೆ! ನೇಮಕಾತಿಯ ಮೆಸೇಜ್ ಸುಳ್ಳು, ನಂಬಬೇಡಿ: ಸಣ್ಣ ನೀರಾವರಿ ಇಲಾಖೆ ಸ್ಪಷ್ಟನೆ 2024ರಲ್ಲಿ ಹತ್ಯೆಯಾದ ಉಗ್ರರಲ್ಲಿ ಶೇ.60ರಷ್ಟು ಪಾಕಿಸ್ತಾನಿಯರು: ಸೇನಾ ಮುಖ್ಯಸ್ಥ ಉಪೇಂದ್ರ!