Thursday, September 19, 2024
Google search engine
Homeಕಾನೂನುಮೇ 14ಕ್ಕೆ ಬಾಬಾ ರಾಮ್ ದೇವ್ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪು!

ಮೇ 14ಕ್ಕೆ ಬಾಬಾ ರಾಮ್ ದೇವ್ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪು!

ಪತಂಜಲಿಯ ದಾರಿ ತಪ್ಪಿಸುವ ಜಾಹಿರಾತುಗಳನ್ನು ವಾಪಸ್ ಪಡೆದಿದ್ದೂ ಅಲ್ಲದೇ ಭೇಷರತ್ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಅಂತ್ಯಗೊಳಿಸಿದ್ದು, ಮೇ 14ಕ್ಕೆ ತೀರ್ಪು ಪ್ರಕಟವಾಗಲಿದೆ.

ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಒಡೆತನದ ಪತಂಜಲಿ ಆಯುರ್ವೇದಿಕ್ ಉತ್ಪನ್ನಗಳ ಕಂಪನಿ ಯಾವುದೇ ರೀತಿಯ ನಿಯಮ ಉಲ್ಲಂಘನೆ ಅಥವಾ ಸುಳ್ಳು ಜಾಹಿರಾತು ಪ್ರಕಟಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯೊಂದಿಗೆ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ತೆರೆ ಎಳೆದಿದೆ.

ನ್ಯಾಯಮೂರ್ತಿ ಹೀಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಔಸಾದ್ದೀನ್ ಅಮಾನುಲ್ಲಾ ನೇತೃತ್ವದ ವಿಭಾಗೀಯ ಪೀಠ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪನ್ನು ಮೇ 14ಕ್ಕೆ ನಿಗದಿಪಡಿಸಿದೆ.

ಆಧುನಿಕ ಚಿಕಿತ್ಸಾ ಪದ್ಧತಿಯಿಂದ ರೋಗಿ ಗುಣಮುಖ ಆಗಲ್ಲ. ಈ ಚಿಕಿತ್ಸಾ ಪದ್ಧತಿ ವ್ಯರ್ಥ ಎಂದು ಪದೇಪದೆ ಹೇಳಿಕೆ ನೀಡಿದ್ದ ಬಾಬಾ ರಾಮ್ ದೇವ್ ವಿರುದ್ಧ ಭಾರತೀಯ ವೈದ್ಯಕೀಯ ಮಂಡಳಿ ಸುಪ್ರೀಂಕೋರ್ಟ್ ಗೆ ದೂರು ನೀಡಿತ್ತು. ಸುದೀರ್ಘ ವಿಚಾರಣೆ ವೇಳೆ ಬಾಬಾ ರಾಮ್ ದೇವ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂಕೋರ್ಟ್ ಕ್ಷಮೆಯಾಚನೆಯನ್ನು ತಿರಸ್ಕರಿಸಿತ್ತು.

ಭೇಷರತ್ ಕ್ಷಮೆಯಾಚನೆ ಅಲ್ಲದೇ ಎಲ್ಲಾ ಪತ್ರಿಕೆ ಮತ್ತು ಟೀವಿ ಚಾನೆಲ್ ಗಳಲ್ಲಿ ಮುಖಪುಟದಲ್ಲಿ ಕ್ಷಮೆಯಾಚಿಸಿದ ನಂತರ ಬಾಬಾ ರಾಮ್ ದೇವ್ ಕ್ರಮವನ್ನು ಒಪ್ಪಿಕೊಂಡ ಸುಪ್ರೀಂಕೋರ್ಟ್, ವಿಚಾರಣೆ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಿ ತೀರ್ಪು ಪ್ರಕಟಿಸಲು ನಿರ್ಧರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments