Home ತಾಜಾ ಸುದ್ದಿ ರಾಜ್ಯದಲ್ಲಿ 406.72 ಕೋಟಿ ರೂ. ವಸ್ತು, 177 ಕೋಟಿ ಮೌಲ್ಯದ ಮದ್ಯ ವಶ!

ರಾಜ್ಯದಲ್ಲಿ 406.72 ಕೋಟಿ ರೂ. ವಸ್ತು, 177 ಕೋಟಿ ಮೌಲ್ಯದ ಮದ್ಯ ವಶ!

by Editor
0 comments
Central-Election-Commission

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕಳೆದ 38 ದಿನಗಳಲ್ಲಿ 406.73 ಕೋಟಿ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದೆ.

ರಾಜ್ಯದಾದ್ಯಂತ 406.73 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಇದರಲ್ಲಿ 177 ಕೋಟಿ ರೂ. ಮೌಲ್ಯದ ಮದ್ಯ ಸೇರಿದೆ. ಮದ್ಯ ಜಪ್ತಿಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ  ನೀತಿ ಸಂಹಿತೆ ಜಾರಿ ಮೇಲೆ ಕಣ್ಣಿಟ್ಟಿರುವ ಚುನಾವಣಾ ಆಯೋಗ, ದಾಖಲೆ ಪ್ರಮಾಣದಲ್ಲಿ ದುಡ್ಡು, ಮದ್ಯ ಜಪ್ತಿ ಮಾಡಿದೆ.

ಮಾರ್ಚ್ 14 ರಂದು ಲೋಕಸಭಾ ಚುನಾವಣೆ ಘೋಷಣೆಯಾಗಿತ್ತು. ದೇಶದಲ್ಲಿ ಅಂದಿನಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿತ್ತು. ಏಪ್ರಿಲ್ 24 ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದ್ದು, ಅಂದಿನಿಂದ ಇಲ್ಲಿಯವರೆಗೆ ಅಂದರೆ 38 ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ದಾಖಲೆ ಇಲ್ಲದ ಹಣ, ಚಿನ್ನಾಭರಣ ಮತ್ತು ಮದ್ಯ ವಶಕ್ಕೆ ಪಡೆಯಲಾಗಿದೆ.

banner

78 ಕೋಟಿ ರೂಪಾಯಿ ನಗದು, 177 ಕೋಟಿ ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ. ಇಡೀ ದೇಶದಲ್ಲೆ ಅತಿಹೆಚ್ಚಿನ ಪ್ರಮಾಣದ ಮದ್ಯದ ಜಪ್ತಿ ಇದಾಗಿದೆ.

ಉಳಿದಂತೆ 11.24 ಕೋಟಿ ರೂ. ಮೌಲ್ಯದ ಮಾದಕ ವಸ್ತು, 59 ಕೋಟಿ ರೂ. ಮೌಲ್ಯದ ಬೆಳ್ಳಿ, ಬಂಗಾರ ಹಾಗೂ ಡೈಮೆಂಡ್, 8.14 ಕೋಟಿ ರೂ. ಮೌಲ್ಯದ ಉಡುಗೊರೆಗಳಾದ ಮಿಕ್ಸರ್, ಫ್ಯಾನ್, ಕುಕ್ಕರ್ ಜಪ್ತಿ ಮಾಡಲಾಗಿದೆ. 72 ಕೋಟಿ ರೂ. ಮೌಲ್ಯದ ಇನ್ನಿತರ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಾಹನ ಸವಾರರಿಗೆ ಬಿಗ್ ಶಾಕ್: ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ! ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ