Home ಕ್ರೀಡೆ ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನಕ್ಕೆ ಮೋದಿ, ಅಮಿತ್ ಶಾ, ಸಚಿನ್ ಅರ್ಜಿ!

ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನಕ್ಕೆ ಮೋದಿ, ಅಮಿತ್ ಶಾ, ಸಚಿನ್ ಅರ್ಜಿ!

by Editor
0 comments
rahul dravid

ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಚಿನ್ ತೆಂಡೂಲ್ಕರ್ ಸೇರಿದಂತೆ 3000 ಅರ್ಜಿಗಳು ಬಂದಿವೆ!

ಹೌದು, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಗುತ್ತಿಗೆ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಇದೇ ಮೊದಲ ಬಾರಿ ಸಾರ್ವಜನಿಕವಾಗಿ ಅರ್ಜಿ ಆಹ್ವಾನಿಸಿತ್ತು.

ಅರ್ಜಿ ಸಲ್ಲಿಕೆಗೆ ಭಾನುವಾರ ಕೊನೆಯ ದಿನವಾಗಿದ್ದು, ಐಪಿಎಲ್ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ಕೋಚ್ ಗೌತಮ್ ಗಂಭೀರ್ ಕೋಚ್ ಆಗಲಿದ್ದಾರೆ ಎಂಬ ವದಂತಿ ಹರಡಿದೆ. ಇದರ ನಡುವೆ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಕೆಯ ವಿವರಗಳನ್ನು ಬಿಸಿಸಿಐ ಬಿಡುಗಡೆ ಮಾಡಿದೆ

ಇದೇ ಮೊದಲ ಬಾರಿ ಕೋಚ್ ಸ್ಥಾನಕ್ಕೆ ಸಾರ್ವಜನಿಕವಾಗಿ ಅರ್ಜಿ ಆಹ್ವಾನಿಸಿದ್ದರಿಂದ 3000ಕ್ಕೂ ಅಧಿಕ ಅರ್ಜಿಗಳು ಬಂದಿವೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಗಣ್ಯರ ಹೆಸರಗಳಲ್ಲಿ ಕೂಡ ಅರ್ಜಿಗಳು ಬಂದಿವೆ.

banner

ದೇಶದ ಗಣ್ಯರು ಹಾಗೂ ರಾಜಕಾರಣಿಗಳ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ವೀರೇಂದ್ರ ಸೆಹ್ವಾಗ್ ಹೆಸರಿನಲ್ಲೂ ಅರ್ಜಿಗಳು ಬಂದಿವೆ. ಈ ರೀತಿ ನಕಲಿ ಅರ್ಜಿಗಳು ಬಂದಿರುವುದು ಇದೇ ಮೊದಲಲ್ಲ. ಕಳೆದ ಬಾರಿಯೂ ಇದೇ ರೀತಿ ನಕಲಿ ಅರ್ಜಿಗಳು ಬಂದಿದ್ದವು ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಾರಿ ಕೋಚ್ ಸ್ಥಾನಕ್ಕೆ ವಿದೇಶೀಯರನ್ನು ನೇಮಕ ಮಾಡಲಾಗುತ್ತದೆ ಎಂಬ ವದಂತಿ ಹರಡಿತ್ತು. ಆದರೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರು ಬಿಸಿಸಿಐ ರಾಜಕೀಯದಿಂದ ಬೇಸತ್ತು ಅರ್ಜಿ ಸಲ್ಲಿಸಲು ಹಿಂದೇಟು ಹಾಕಿದ್ದಾರೆ. ಮತ್ತೊಂದೆಡೆ ಬಿಜೆಪಿಯ ಮಾಜಿ ಶಾಸಕ ಗೌತಮ್ ಗಂಭೀರ್ ಆಯ್ಕೆಗೆ ತೆರೆಮರೆಯ ಪ್ರಯತ್ನಗಳು ನಡೆದಿವೆ ಎಂದು ಹೇಳಲಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!