Friday, October 4, 2024
Google search engine
Homeತಾಜಾ ಸುದ್ದಿರಾಜ್ಯದಲ್ಲಿ ಮುಂಗಾರು ಚುರುಕು: ಜೂ.12ರವರೆಗೆ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಚುರುಕು: ಜೂ.12ರವರೆಗೆ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!

ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ಭಾರೀ ಮಳೆಯಾಗಲಿದ್ದು, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯ ಹವಾಮಾನ ಇಲಾಖೆ ಶನಿವಾರ ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ. ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ನೀಡಿ ಎಚ್ಚರಿಕೆ ವಹಿಸಲು ಸೂಚನೆ ನೀಡಿದೆ.

ಕಳೆದೊಂದು ವಾರದಿಂದ ರಾಜ್ಯದ ಎಲ್ಲಾ ಭಾಗದಲ್ಲೂ ಅಬ್ಬರದ ಮಳೆಯಾಗುತ್ತಿದೆ. ಇದೀಗ ಇಲಾಖೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಿಗೆ ಅಲರ್ಟ್‍ಗಳನ್ನು ಘೋಷಣೆ ಮಾಡಲಾಗಿದೆ. ಮುಂದಿನ 3 ಗಂಟೆಗಳ ಕಾಲ 30-40 ಕಿಮೀ ವೇಗದಲ್ಲಿ ಗಾಳಿ, ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments