Home ಅಪರಾಧ ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದ ಎಕೆ-47 ಬಳಕೆ, ಲಂಕೆಗೆ ಪರಾರಿಯಾಗಲು ಸಂಚು!

ಸಲ್ಮಾನ್ ಖಾನ್ ಹತ್ಯೆಗೆ ಪಾಕಿಸ್ತಾನದ ಎಕೆ-47 ಬಳಕೆ, ಲಂಕೆಗೆ ಪರಾರಿಯಾಗಲು ಸಂಚು!

by Editor
0 comments

ಪಾಕಿಸ್ತಾನದ ಮೂಲಕ ತರಿಸಲಾದ ಎಕೆ-47 ಮತ್ತು ಎಂ-16 ಗನ್ ಗಳಿಂದ ಅಪ್ರಾಪ್ತ ಶಾರ್ಪ್ ಶೂಟರ್ ಗಳನ್ನು ಬಳಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆ ನಡೆಸಿ ಶ್ರೀಲಂಕಾಗೆ ಪರಾರಿಯಾಗಲು ಸಂಚು ರೂಪಿಸಲಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಖ್ಯಾತ ಪಂಜಾಬಿ ಗಾಯಕ ಸಿದು ಮೂಸೆವಾಲಾ ಅವರನ್ನು ಹತ್ಯೆಗೈದ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಗ್ಯಾಂಗ್ ಸಲ್ಮಾನ್ ಖಾನ್ ಹತ್ಯೆಗೆ ಮಾಸ್ಟರ್ ಪ್ಲಾನ್ ರೂಪಿಸಿತ್ತು ಎಂದು ತಿಳಿದು ಬಂದಿದೆ.

ಮೂಸೆವಾಲಾ ಹತ್ಯೆಗೆ ಬಳಸಿದ್ದ ಗನ್ ಗಳನ್ನೇ ಸಲ್ಮಾನ್ ಖಾನ್ ಹತ್ಯೆಗೆ ಬಳಸಲು ಸಂಚು ನಡೆದಿದ್ದು, ಇದು ಟರ್ಕಿ ಮೂಲದ ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ ಪಾಕಿಸ್ತಾನ ಮಧ್ಯವರ್ತಿಯಿಂದ ತರಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ತರಿಸುತ್ತಿದ್ದ ಲಾರೆನ್ಸ್ ಗ್ಯಾಂಗ್, ಸಲ್ಮಾನ್ ಖಾನ್ ಮಾತ್ರವಲ್ಲ ದೇಶದ ಪ್ರಮುಖ 60ರಿಂದ 70 ಪ್ರಮುಖರ ಹತ್ಯೆಗೆ ಸಂಚು ರೂಪಿಸಿತ್ತು ಎಂದು ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ತಿಳಿಸಿದ್ದಾರೆ.

banner

ಲಾರೆನ್ಸ್ ಗ್ಯಾಂಗ್ ಪ್ರಮುಖರ ಹತ್ಯೆಗೆ ಅದರಲ್ಲೂ ಸಲ್ಮಾನ್ ಖಾನ್ ಹತ್ಯೆಗೆ ಅಪ್ರಾಪ್ತ ಯುವಕರನ್ನು ಬಳಸಲು ಸಿದ್ಧತೆ ನಡೆಸಿತ್ತು. ಇದಕ್ಕಾಗಿ ಯುವಕರನ್ನು ತರಬೇತಿ ನೀಡಿ ಸಜ್ಜುಗೊಳಿಸಲಾಗುತ್ತಿತ್ತು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

ವಾಟ್ಸಪ್ ಕಾಲ್ ಗಳ ಮೂಲಕ ಮಧ್ಯವರ್ತಿಗಳಿಂದ ಎಕೆ-47, ಎಂ-16 ಮತ್ತು ಎಕೆ-96 ಅತ್ಯಾಧುನಿಕ ಗನ್ ಗಳನ್ನು ಲಾರೆನ್ಸ್ ಗ್ಯಾಂಗ್ ತರಿಸುತ್ತಿತ್ತು. ಸಲ್ಮಾನ್ ಖಾನ್ ಹತ್ಯೆ ನಂತರ ಯುವಕರನ್ನು ಕನ್ಯಾಕುಮಾರಿ ಮೂಲಕ ಸಮುದ್ರ ಮಾರ್ಗವಾಗಿ ಶ್ರೀಲಂಕೆಗೆ ಕಳುಹಿಸುವುದು. ಅಲ್ಲಿ ಕೆಲ ದಿನಗಳು ತಂಗಿದ್ದ ನಂತರ ಕೆನಡಾಗೆ ಪ್ರಯಾಣ ಬೆಳಸಿ ಅಲ್ಲಿ ಸುರಕ್ಷಿತ ಪ್ರದೇಶದಲ್ಲಿ ಇರುತ್ತಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ! ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟ! ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ, ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ದಲಿತ ಅಥ್ಲೀಟ್ ಮೇಲೆ 65 ಜನರಿಂದ ಅತ್ಯಾಚಾರ: 44 ಮಂದಿ ಬಂಧನ ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ