Home ತಾಜಾ ಸುದ್ದಿ ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ

ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ

ಕಾಂಗ್ರೆಸ್ ಸಂಸದ ಮನು ಸಿಂಘ್ವಿ ಅವರ ಆಸನದಲ್ಲಿ ನೋಟಿನ ಕಂತೆ ಪತ್ತೆಯಾಗಿದ್ದರಿಂದ ರಾಜ್ಯಸಭೆಯಲ್ಲಿ ಶುಕ್ರವಾರ ಕೋಲಾಹಲ ಉಂಟಾಗಿದೆ.

by Editor
0 comments
rajyasabha

ಕಾಂಗ್ರೆಸ್ ಸಂಸದ ಮನು ಸಿಂಘ್ವಿ ಅವರ ಆಸನದಲ್ಲಿ ನೋಟಿನ ಕಂತೆ ಪತ್ತೆಯಾಗಿದ್ದರಿಂದ ರಾಜ್ಯಸಭೆಯಲ್ಲಿ ಶುಕ್ರವಾರ ಕೋಲಾಹಲ ಉಂಟಾಗಿದೆ.

ರಾಜ್ಯಸಭಾಧ್ಯಕ್ಷ ಜಗದೀಪ್ ಧಂಕರ್ ಗುರುವಾರ ನಡೆದ ಕಲಾಪ ಗದ್ಧಲದಿಂದ ಮುಂದೂಡಲಾಯಿತು. ನಂತರ ಕೊಠಡಿಯನ್ನು ಪರಿಶೀಲಿಸಿದಾಗ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಮನು ಸಿಂಘ್ವಿ ಅವರ ಆಸನದಲ್ಲಿ ನೋಟಿನ ಕಂತೆ ಪತ್ತೆಯಾಗಿದೆ ಎಂದು ಹೇಳಿದರು.

ಇದರಿಂದ ಆಡಳಿತಾರೂಢ ಪಕ್ಷಗಳ ಸದಸ್ಯರು ಹಾಗೂ ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದಿದ್ದರಿಂದ ಸಭೆಯಲ್ಲಿ ಕೋಲಾಹಲ ಸೃಷ್ಟಿಯಾಗಿ ಏನೂ ಕೇಳದಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

ಸಭಾಧ್ಯಕ್ಷರು ಹಣ ಸಿಕ್ಕಿದ್ದನ್ನು ಪ್ರಸ್ತಾಪಿಸಿ ತನಿಖೆಗೆ ಆದೇಶಿಸುವ ಬದಲು ಯಾರ ಹಣ ಎಂಬುದು ತನಿಖೆ ನಡೆಯುವ ಮುನ್ನವೇ ಮನು ಸಿಂಘ್ವಿ ಹೆಸರು ಘೋಷಿಸಿದ್ದಕ್ಕೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.

banner

ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ ವೇಳೆ ಆಸನ ಸಂಖ್ಯೆ 222ರಲ್ಲಿ ನೋಟಿನ ಕಂತೆ ಪತ್ತೆಯಾಗಿದೆ. ಈ ಆಸನವನ್ನು ಕಾಂಗ್ರೆಸ್ ಸಂಸದ ಮನು ಸಿಂಘ್ವಿ ಅವರಿಗೆ ನೀಡಲಾಗಿದೆ. ಈ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ ಎಂದು ರಾಜ್ಯಸಭಾ ಅಧ್ಯಕ್ಷರ ಜಗದೀಪ್ ಧಂಕರ್ ಹೇಳಿದರು.

ಸ್ಪೀಕರ್ ಆರೋಪವನ್ನು ಮನು ಸಿಂಘ್ವಿ ನಿರಾಕರಿಸಿದ್ದು, ನಾನು 500 ರೂ. ಮಾತ್ರ ಇಟ್ಟುಕೊಂಡಿದ್ದೆ. ಇಷ್ಟು ದೊಡ್ಡ ಮೊತ್ತ ಎಲ್ಲಿಂದ ಬರಲು ಸಾಧ್ಯ ಎಂದು ಪ್ರಶ್ನಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಸಾಮೂಹಿಕ ಅತ್ಯಾಚಾರ ಎಸಗಿದ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಎಫ್ ಐಆರ್ ದಾಖಲು! ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ! ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟ! ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ, ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ದಲಿತ ಅಥ್ಲೀಟ್ ಮೇಲೆ 65 ಜನರಿಂದ ಅತ್ಯಾಚಾರ: 44 ಮಂದಿ ಬಂಧನ