Home ಕ್ರೀಡೆ ಐಪಿಎಲ್ ಗೆ ಪಂತ್ ಗ್ರೀನ್ ಸಿಗ್ನಲ್: ಶಮಿ, ಕೃಷ್ಣ ಔಟ್, ಕೆಎಲ್ ರಾಹುಲ್ ಡೌಟ್!

ಐಪಿಎಲ್ ಗೆ ಪಂತ್ ಗ್ರೀನ್ ಸಿಗ್ನಲ್: ಶಮಿ, ಕೃಷ್ಣ ಔಟ್, ಕೆಎಲ್ ರಾಹುಲ್ ಡೌಟ್!

by Editor
0 comments

ಮಾಸಾಂತ್ಯದಲ್ಲಿ ಆರಂಭವಾಗಲಿರುವ ಐಪಿಎಲ್ ಟಿ-20 2024ರ ಆವೃತ್ತಿಗೆ ಗಾಯಗೊಂಡ ರಿಷಭ್ ಪಂತ್ ಆಡಲು ಗ್ರೀನ್ ಸಿಗ್ನಲ್ ದೊರೆತಿದೆ.

ಬಿಸಿಸಿಐ ವೈದ್ಯಕೀಯ ತಂಡ ಆಟಗಾರರ ಫಿಟ್ನೆಸ್ ಕುರಿತು ಪ್ರಮಾಣ ಪತ್ರ ನೀಡಿದ್ದು, ರಿಷಭ್ ಪಂತ್ ಗೆ ಆಡಲು ಯೋಗ್ಯ ಎಂದು ಘೋಷಿಸಿದೆ. ಮಧ್ಯಮ ವೇಗಿಗಳಾದ ಮೊಹಮದ್ ಶಮಿ, ಪ್ರಸಿದ್ಧ ಕೃಷ್ಣ ಗಾಯದ ಕಾರಣ ಆಡಲು ಸಾಧ್ಯವಾಗುತ್ತಿಲ್ಲ.

ಕರ್ನಾಟಕದ ಯುವ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗಾಯದಿಂದ ಚೇತರಿಸಿಕೊಂಡಿರುವ ಬಗ್ಗೆ ಅನುಮಾನವಿದ್ದು, ಪೂರ್ಣ ಪ್ರಮಾಣದಲ್ಲಿ ಲಕ್ನೋ ಜೈಂಟ್ಸ್ ಪರ ಆಡಲು ಯೋಗ್ಯರೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ರಿಷಭ್ ಪಂತ್ ಕೆಲವು ದಿನಗಳಿಂದ ನೆಟ್ ಅಭ್ಯಾಸ ಆರಂಭಿಸಿದ್ದು, ಉತ್ತಮವಾಗಿ ಬ್ಯಾಟ್ ಮಾಡುತ್ತಿದ್ದಾರೆ. ಅಲ್ಲದೇ ಅವರಿಗೆ ಗಾಯದ ಸಮಸ್ಯೆ ಕಾಡುತ್ತಿಲ್ಲ. ಒಂದು ವೇಳೆ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮುಂಬರುವ ಟಿ-20 ವಿಶ್ವಕಪ್ ಗೆ ಸ್ಥಾನ ಗಳಿಸುವ ಸಾಧ್ಯತೆ ಇದೆ ಎಂದು ಬಿಸಿಸಿಐ ತಿಳಿಸಿದೆ.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು, 16 ಮಂದಿ ಕಣ್ಮರೆ: ಕೇಂದ್ರ ಕೊಟ್ಟ ಕೆಲಸ ಬಾಯಿ ಮುಚ್ಚಿಕೊಂಡು ಮಾಡಿ: ಕೈ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ 5 ನಿಮಿಷದಲ್ಲಿ 12 ಕೋಟಿ ಚಿನ್ನಾಭರಣ ಲೂಟಿ: ದರೋಡೆಕೋರರ ಮಾಸ್ಟರ್ ಪ್ಲಾನ್! ಗರ್ಭಿಣಿಯರಿಗೆ 21,000, ಬಡ ಮಹಿಳೆಯರಿಗೆ 2500 ರೂ.: ಬಿಜೆಪಿ ಚುನಾವಣಾ ಪ್ರಣಾಳಿಕೆ ಘೋಷಣೆ ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ! ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕುಸ್ಥಾಪನೆ ನೆರವೇರಿಸಿ ನುಡಿದಂತೆ ನಡೆದ ಸಿಎಂ 5 ಗಂಟೆ ಶಸ್ತ್ರಚಿಕಿತ್ಸೆ ನಂತರ ಸೈಫ್ ದೇಹದಿಂದ 2.5 ಇಂಚು ಉದ್ದದ ಚಾಕು ಹೊರತೆಗೆದ ವೈದ್ಯರು! ಫೆ.1ರಿಂದ ಏರ್ ಶೋ: ಯಲಹಂಕದ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ ನನ್ನ ಖಾಸಗಿ ವೀಡಿಯೊಗಳನ್ನು ಮರಳಿಸಿ: ಪ್ರಜ್ವಲ್ ರೇವಣ್ಣ ಮನವಿಗೆ ಹೈಕೋರ್ಟ್ ಚಾಟಿ!