Monday, September 16, 2024
Google search engine
Homeಅಪರಾಧದರ್ಶನ್ ಗ್ಯಾಂಗ್ ವಿರುದ್ಧ ಇನ್ನೆರಡು ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ: ಪೊಲೀಸ್ ಆಯುಕ್ತ ದಯಾನಂದ್

ದರ್ಶನ್ ಗ್ಯಾಂಗ್ ವಿರುದ್ಧ ಇನ್ನೆರಡು ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ: ಪೊಲೀಸ್ ಆಯುಕ್ತ ದಯಾನಂದ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಇನ್ನೆರಡು ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಚಾರ್ಜ್ ಶೀಟ್ ಸಿದ್ಧವಾಗಿದ್ದು, ಕೆಲವು ಸಣ್ಣಪುಟ್ಟ ತಪ್ಪುಗಳನ್ನು ಸರಿಪಡಿಸಲಾಗುತ್ತಿದೆ. ಇದು ಪೂರ್ಣಗೊಂಡ ನಂತರ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದರು.

ಈಗಾಗಲೇ ಪೊಲೀಸರ ಕೈಗೆ ಎಫ್ಚೆಸ್ ಎಲ್ ವರದಿ, ತಾಂತ್ರಿಕ ವರದಿ, ಸಿಸಿಟಿವಿ ದೃಶ್ಯ, ಸಾಕ್ಷಿಗಳ ಹೇಳಿಕೆಗಳನ್ನು ಸಂಗ್ರಹಿಸಲಾಗಿದೆ. ಇವುಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗುವುದು ಎಂದು ಅವರು ಹೇಳಿದರು.

ಚಾರ್ಜ್ ಶೀಟ್ ಅನ್ನು ಎಸ್ ಪಿ ಸಿದ್ಧಪಡಿಸುತ್ತಿದ್ದಾರೆ. ಎಲ್ಲವೂ ಇನ್ನೆರಡು ದಿನದಲ್ಲಿ ಮುಗಿಯಲಿದೆ. ಸದ್ಯಕ್ಕೆ ಪ್ರಾಥಮಿಕ ವರದಿ ಸಲ್ಲಿಸಲಿದ್ದು, ನಂತರ ಪೂರ್ಣ ಪ್ರಮಾಣದ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಅವರು ವಿವರಿಸಿದರು.

ದರ್ಶನ್ ಮತ್ತು 17 ಸಹಚರರ ವಿರುದ್ಧ 4500 ಪುಟಗಳ ಚಾರ್ಜ್ ಶೀಟ್ ಸಿದ್ಧವಾಗಿದೆ ಎಂದು ಹೇಳಲಾಗಿದೆ. ಪ್ರಸ್ತುತ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments