Home ಅಪರಾಧ ತಾಯಿ ಮೇಲೆ ಅಪ್ಪ-ಮಗನಿಂದ ಅತ್ಯಾಚಾರ, ಮಗಳನ್ನು ವಿವಸ್ತ್ರಗೊಳಿಸಿ ವಿಕೃತಿ: ಪ್ರಜ್ವಲ್ ವಿರುದ್ಧ ಸಂತ್ರಸ್ತೆ ದೂರು!

ತಾಯಿ ಮೇಲೆ ಅಪ್ಪ-ಮಗನಿಂದ ಅತ್ಯಾಚಾರ, ಮಗಳನ್ನು ವಿವಸ್ತ್ರಗೊಳಿಸಿ ವಿಕೃತಿ: ಪ್ರಜ್ವಲ್ ವಿರುದ್ಧ ಸಂತ್ರಸ್ತೆ ದೂರು!

by Editor
0 comments

ನನ್ನ ತಾಯಿ ಮೇಲೆ ಅತ್ಯಾಚಾರ ಮಾಡಿದ ಸಂಸದ ಪ್ರಜ್ವಲ್ ರೇವಣ್ಣ ನನ್ನನ್ನು ವಿವಸ್ತ್ರಗೊಳಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಮತ್ತೊಬ್ಬ ಸಂತ್ರಸ್ತೆ ಎಸ್ ಐಟಿ ಪೊಲೀಸರಿಗೆ ವಿವರಣೆ ನೀಡಿದ್ದು, ಮತ್ತೊಂದು ದೂರು ದಾಖಲಾಗಿದೆ.

ಎಸ್ ಐಟಿ ವಿಚಾರಣೆಗೆ ಹಾಜರಾದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು, ನಾಲ್ಕೈದು ವರ್ಷಗಳ ಹಿಂದೆ ನನ್ನ ತಾಯಿ ಮೇಲೆ ಪ್ರಜ್ವಲ್ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ವೀಡಿಯೊ ಕಾಲ್ ಮಾಡಿ ಬಟ್ಟೆ ಬಿಚ್ಚುವಂತೆ ಬೆದರಿಸುತ್ತಿದ್ದ ಎಂದು ಹೇಳಿದ್ದಾರೆ.

ನನ್ನ ತಂದೆಯನ್ನು ಉದ್ಯೋಗದಿಂದ ತೆಗೆದು ಹಾಕುವುದಾಗಿ ಪ್ರಜ್ವಲ್ ರೇವಣ್ಣ ಮತ್ತು ತಂದೆ ಹಾಗೂ ಶಾಸಕ ಎಚ್.ಡಿ. ರೇವಣ್ಣ ನನ್ನ ತಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ನನ್ನ ಮೇಲೂ ದೌರ್ಜನ್ಯ ಎಸಗಿದ್ದಾರೆ. ಇಷ್ಟಾದರೂ ದೂರು ನೀಡಿ ನನ್ನ ತಂದೆಯನ್ನು ಉದ್ಯೋಗದಿಂದ ತೆಗೆದು ಹಾಕಿದ್ದಾರೆ ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

2020-201ರ ನಡುವೆ ಬೆಂಗಳೂರಿನ ತಮ್ಮ ಮನೆಗೆ ನನ್ನ ತಾಯಿಯನ್ನು ಕರೆಸಿಕೊಂಡಿದ್ದ ಪ್ರಜ್ವಲ್ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ತಂದೆ ಎಚ್.ಡಿ. ರೇವಣ್ಣ ಕೂಡ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪ್ರಜ್ವಲ್ ರೇವಣ್ಣ ಮೊಬೈಲ್ ನಂಬರ್ ಬದಲಿಸಿದರೂ ಕರೆ ಮಾಡಿ ವೀಡಿಯೊ ಕಾಲ್ ರಿಸೀವ್ ಮಾಡುವಂತೆ ನನ್ನ ತಾಯಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

banner

ಇದೇ ವೇಳೆ ಮನೆ ಕೆಲಸದವರ ಮೇಲೆ ಕೂಡ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿರುವುದು ನಿಜ. ಅಪ್ಪ-ಮಕ್ಕಳಿಂದ ದೌರ್ಜನ್ಯ ನಡೆದಿದೆ. ಆದರೆ ಅವರ ಬ್ಲಾಕ್ ಮೇಲ್ ತಂತ್ರದಿಂದ ಬಹಿರಂಗ ಹೇಳಿಕೆ ನೀಡಲು ಹೆದರುತ್ತಿದ್ದಾರೆ ಎಂದು ಆಕೆ ಹೇಳಿದ್ದಾರೆ.

ಕೆಲಸದವರನ್ನು ಜೀತದಾಳುಗಳಂತೆ ನೋಡಿಕೊಳ್ಳುತ್ತಿದ್ದರು. ಮನೆ ಕೆಲಸದವರು ರಾತ್ರಿ 1 ಗಂಟೆ 2 ಗಂಟೆ ನಂತರ ಕರೆ ಮಾಡಿ ಮಾತನಾಡಬೇಕಿತ್ತು. ಅಲ್ಲಿಯವರೆಗೆ ಮಾತನಾಡಲು ಅವಕಾಶವೇ ನೀಡುತ್ತಿರಲಿಲ್ಲ. ಕೆಲಸದವರ ಮೇಲೆ, ಸಮಸ್ಯೆ ಹೇಳಿಕೊಂಡು ಬಂದವರ ಮೇಲೆ ಇವರು ಲೈಂಗಿಕ ದೌರ್ಜನ್ಯ ನಡೆಸುವುದು ಅಭ್ಯಾಸವಾಗಿತ್ತು ಎಂದು ಅವರು ವಿವರಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಸಾಮೂಹಿಕ ಅತ್ಯಾಚಾರ ಎಸಗಿದ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಎಫ್ ಐಆರ್ ದಾಖಲು! ಬಿಆರ್‌ಎಸ್ ನಾಯಕ ರಾಮರಾವ್, ಹರೀಶ್‌ಗೆ ಗೃಹಬಂಧನ ಇಸ್ರೇಲ್-ಹಮಾಸ್ ಕದನ ವಿರಾಮ ಸಾಧ್ಯತೆ: ಮಧ್ಯಪ್ರಾಚ್ಯದಲ್ಲಿ ಶಾಂತಿ ವಾಪಸ್ 3ನೇ ತಲೆಮಾರಿನ ನಾಗ್ ಕ್ಷಿಪಣಿ ಮೊದಲ ಪ್ರಯೋಗ ಯಶಸ್ವಿ! ಖೋಖೋ ವಿಶ್ವಕಪ್: ಬ್ರೆಜಿಲ್ ಮಣಿಸಿದ ಭಾರತ ಪುರುಷರ ತಂಡ ನಾಕೌಟ್ ಸನಿಹ ಖೋ-ಖೋ ವಿಶ್ವಕಪ್‌ 2025: ದಕ್ಷಿಣ ಕೊರಿಯಾ ವಿರುದ್ಧ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡ ರಣಜಿ ಟ್ರೋಫಿ ದೆಹಲಿ ಸಂಭಾವ್ಯ ತಂಡದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ! ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ವಾರ್ಷಿಕ ಪ್ರಶಸ್ತಿ ಪ್ರಕಟ! ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನ, ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ದಲಿತ ಅಥ್ಲೀಟ್ ಮೇಲೆ 65 ಜನರಿಂದ ಅತ್ಯಾಚಾರ: 44 ಮಂದಿ ಬಂಧನ