Home ಕ್ರೀಡೆ ಚೆನ್ನೈ ವಿರುದ್ಧ 27 ರನ್ ಜಯ, ಸತತ 6 ಗೆಲುವಿನೊಂದಿಗೆ ಪ್ಲೇಆಫ್ ಗೆ ಲಗ್ಗೆ ಹಾಕಿದ ಆರ್ ಸಿಬಿ!

ಚೆನ್ನೈ ವಿರುದ್ಧ 27 ರನ್ ಜಯ, ಸತತ 6 ಗೆಲುವಿನೊಂದಿಗೆ ಪ್ಲೇಆಫ್ ಗೆ ಲಗ್ಗೆ ಹಾಕಿದ ಆರ್ ಸಿಬಿ!

by Editor
0 comments
virat kohli

ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್ ಗಳಿಂದ ಜಯಭೇರಿ ಬಾರಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ 6 ಗೆಲುವಿನೊಂದಿಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಗೆ ಲಗ್ಗೆ ಹಾಕಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 218 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 7 ವಿಕೆಟ್ ಗೆ 191 ರನ್ ಗಳಿಸಲಷ್ಟೇ ಶಕ್ತವಾಯಿತು.

ಪಂದ್ಯದ ಕೊನೆಯ ಓವರ್ ನಲ್ಲಿ ಚೆನ್ನೈ ಗೆಲ್ಲಲು 35 ರನ್ ಹಾಗೂ ಪ್ಲೇಆಫ್ ಪ್ರವೇಶಿಸಲು 17 ರನ್ ಬೇಕಿತ್ತು. ಮತ್ತೊಂದೆಡೆ ಆರ್ ಸಿಬಿಗೆ 16 ರನ್ ಒಳಗೆ ಕಡಿವಾಣ ಹಾಕಬೇಕಿತ್ತು. ಆದರೆ ದಯಾಳ್ ಎಸೆದ ಮೊದಲ ಎಸೆತವನ್ನೇ ಧೋನಿ 110 ಮೀ. ದೂರದ ಸಿಕ್ಸರ್ ಸಿಡಿಸಿ ಆಘಾತ ಮೂಡಿಸಿದರು. ಆದರೆ ದಯಾಳ್ ಎರಡನೇ ಎಸೆತದಲ್ಲಿ ಧೋನಿ ವಿಕೆಟ್ ಪಡೆದು ಆಘಾತ ನೀಡಿದರು.

ನಂತರ ಬಂದ ಶಾರ್ದೂಲ್ ಠಾಕೂರ್ ಒಂದು ಡಾಟ್ ಬಾಲ್ ಮಾಡಿ ನಂತರ ಎಸೆತದಲ್ಲಿ ಒಂದು ರನ್ ತೆಗೆದರು. ಕೊನೆಯ ಎರಡು ಎಸೆತದಲ್ಲಿ 10 ರನ್ ಗಳಿಸಬೇಕಿದ್ದಾಗ ಜಡೇಜಾ ಎರಡೂ ಎಸೆತಗಳಲ್ಲಿ ರನ್ ಗಳಿಸಲು ವಿಫಲರಾದರು ಈ ಮೂಲಕ ಆರ್ ಸಿಬಿ, ಹಾಲಿ ಚಾಂಪಿಯನ್ ಚೆನ್ನೈ ಮಣಿಸಿ ಅಗ್ರ 4ರೊಳಗೆ ಪ್ರವೇಶಿಸುವ ಮೂಲಕ ಪ್ಲೇಆಫ್ ಪ್ರವೇಶಿಸಿತು.

banner

ಕಠಿಣ ಗುರಿ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಆದರೆ ಬೆಂಗಳೂರು ಮೂಲದ ರಚಿತ್ ರವಿಂದರ್ ಮತ್ತು ಅಜಿಂಕ್ಯ ರಹಾನೆ ಮೂರನೇ ವಿಕೆಟ್ ಗೆ 66 ರನ್ ಜೊತೆಯಾಟದಿಂದ ತಂಡವನ್ನು ಕುಸಿತದಿಂದ ಪಾರು ಮಾಡಿದರು.

ರಚಿತ್ ರವಿಂದರ್ 37 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 61 ರನ್ ಬಾರಿಸಿದರೆ, ರಹಾನೆ 22 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 33 ರನ್ ಗಳಿಸಿದರು. ಈ ಹಂತದಲ್ಲಿ ಆರ್ ಸಿಬಿ ಬೌಲರ್ ಗಳು ತಿರುಗೇಟು ನೀಡಿದ್ದರಿಂದ ಪಂದ್ಯ ರೋಚಕ ತಿರುವು ಪಡೆಯಿತು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಾಹನ ಸವಾರರಿಗೆ ಬಿಗ್ ಶಾಕ್: ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ! ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ