Home ಕ್ರೀಡೆ ಆರ್ ಸಿಬಿ ಕನಸು ನನಸು: ಕೊನೆಗೂ ಒಲಿದ WPL ನೂತನ ಚಾಂಪಿಯನ್ ಪಟ್ಟ!

ಆರ್ ಸಿಬಿ ಕನಸು ನನಸು: ಕೊನೆಗೂ ಒಲಿದ WPL ನೂತನ ಚಾಂಪಿಯನ್ ಪಟ್ಟ!

by Editor
0 comments

ಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹಿಳೆಯರ ಪ್ರೀಮಿಯರ್ ಲೀಗ್ ಡಬ್ಲೂಪಿಎಲ್ ಟಿ-20 ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಆರ್ ಸಿಬಿ ಮೊದಲ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿ ಇತಿಹಾಸ ಬರೆದಿದೆ.

ಡೆಲ್ಲಿಯಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಆರ್ ಸಿಬಿ ವನಿತೆಯರ ತಂಡ 8 ವಿಕೆಟ್ ಗಳಿಂದ ಜಯಭೇರಿ ಬಾರಿಸಿ ಪ್ರಶಸ್ತಿ ಎತ್ತಿ ಹಿಡಿಯಿತು. ಈ ಮೂಲಕ ಐಪಿಎಲ್ ನಲ್ಲಿ ಪುರುಷರ ತಂಡಕ್ಕೆ ಮರೀಚಿಕೆಯಾಗಿದ್ದ ಪ್ರಶಸ್ತಿಯನ್ನು ಮಹಿಳೆಯರು ಸಾಧಿಸಿ ತೋರಿಸಿದ್ದಾರೆ.

ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರಿಯಾಂಕಾ ಪಾಟೀಲ್ ಮಾರಕ ದಾಳಿಗೆ ತತ್ತರಿಸಿ 18.3 ಓವರ್ ಗಳಲ್ಲಿ 113 ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟಾಯಿತು. ಸುಲಭ ಗುರಿ ಬೆಂಬತ್ತಿದ ಆರ್ ಸಿಬಿ 19.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಆರ್ ಸಿಬಿ ತಂಡಕ್ಕೆ ನಾಯಕ ಸ್ಮೃತಿ ಮಂದಾನ ಮತ್ತು ಸೋಫಿ ಡಿವೈನ್ ಮೊದಲ ವಿಕೆಟ್ ಗೆ 49 ರನ್ ಜೊತೆಯಾಟ ನಿಭಾಯಿಸಿ ಉತ್ತಮ ಆರಂಭ ತಂದುಕೊಟ್ಟರು. ಸ್ಮೃತಿ ಮಂದಾನ 39 ಎಸೆತಗಳಲ್ಲಿ 3 ಬೌಂಡರಿ ಸೇರಿದ 31 ರನ್ ಬಾರಿಸಿ ಔಟಾದರೆ, ಸೋಫಿ 27 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 32 ರನ್ ಗಳಿಸಿ ನಿರ್ಗಮನಿಸಿದರು.

banner

ಇವರಿಬ್ಬರ ನಿರ್ಗಮನದ ನಂತರ ಜೊತೆಯಾದ ಎಲ್ಸಿ ಪೆರ್ರಿ ಮತ್ತು ರೀಚಾ ಘೋಷ್ ಮುರಿಯದ ಮೂರನೇ ವಿಕೆಟ್ ಗೆ 33 ರನ್ ಜೊತೆಯಾಟದಿಂದ ತಂಡವನ್ನು ಗೆಲುವಿನ ದಡ ಸೇರಿಸಿದರು. ಎಲ್ಸಿ ಪೆರ್ರಿ 37 ಎಸೆತಗಳಲ್ಲಿ 4 ಬೌಂಡರಿ ಸಹಿತ ಔಟಾಗದೇ 35 ರನ್ ಬಾರಿಸಿದರೆ, ರೀಚಾ ಘೋಷ್ 17 ಎಸೆತಗಳಲ್ಲಿ 2 ಬೌಂಡರಿ ಸಹಿತ ಅಜೇಯ 17 ರನ್ ಗಳಿಸಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರಿಯಾಂಕಾ ಪಾಟೀಲ್ ಮತ್ತು ಸೋಫಿ ಮೋಲಿನೆಕ್ಸ್ ಮಾರಕ ದಾಳಿ ನಡೆಸಿ ಕಟ್ಟಿ ಹಾಕಿದರು. ಪ್ರಿಯಾಂಕಾ 12 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಸೋಫಿ 20 ರನ್ ನೀಡಿ 3 ವಿಕೆಟ್ ಮತ್ತು ಆಶಾ ಸೋಬಾನೆ 14 ರನ್ ನೀಡಿ 2 ವಿಕೆಟ್ ಪಡೆದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ ಬಿಜೆಪಿ ಬಣ ಕಿತ್ತಾಟಕ್ಕೆ ಟ್ವಿಸ್ಟ್: ಪ್ರಧಾನ ಕಾರ್ಯದರ್ಶಿ ಸ್ಥಾನ ಒಲ್ಲೆ ಅಂದ ಶಾಸಕ ಸುನೀಲ್ ಕುಮಾರ್!