Home ಕ್ರೀಡೆ ಟಿ-20 ವಿಶ್ವಕಪ್ ಮೊದಲ ಪಂದ್ಯದಲ್ಲೇ 2 ದಾಖಲೆ ಬರೆದ ರೋಹಿತ್ ಶರ್ಮ!

ಟಿ-20 ವಿಶ್ವಕಪ್ ಮೊದಲ ಪಂದ್ಯದಲ್ಲೇ 2 ದಾಖಲೆ ಬರೆದ ರೋಹಿತ್ ಶರ್ಮ!

by Editor
0 comments

ಭಾರತ ತಂಡದ ನಾಯಕ ರೋಹಿತ್ ಶರ್ಮ ಟಿ-20 ವಿಶ್ವಕಪ್ ಮೊದಲ ಪಂದ್ಯದಲ್ಲಿ ಎರಡು ದಾಖಲೆ ಬರೆದಿದ್ದಾರೆ.

ಐರ್ಲೆಂಡ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ 8 ವಿಕೆಟ್ ಗೆಲುವು ಸಾಧಿಸಿದ ರೋಹಿತ್ ಶರ್ಮ ಟಿ-20 ಕ್ರಿಕೆಟ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ನಂತರ ಅತ್ಯಂತ ಯಶಸ್ವಿ ನಾಯಕ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಮತ್ತೊಂದೆಡೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 600 ಸಿಕ್ಸರ್ ಬಾರಿಸಿದ ತಮ್ಮದೇ ವಿಶ್ವದಾಖಲೆಯನ್ನು ಉತ್ತಮಪಡಿಸಿಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 600 ಸಿಕ್ಸರ್ ಬಾರಿಸಿದ ಮೊದಲಿಗ ರೋಹಿತ್ ಶರ್ಮ. ಇದಕ್ಕೂ ಮೊದಲು ವೆಸ್ಟ್ ಇಂಡೀಸ್ ನ ಕ್ರಿಸ್ ಗೇಲ್ 553 ಸಿಕ್ಸರ್ ಬಾರಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ಭಾರತದ ಅತ್ಯಂತ ಯಶಸ್ವಿ ನಾಯಕರಾಗಿದ್ದರು. ಧೋನಿ ನಾಯಕತ್ವದಲ್ಲಿ ಭಾರತ ತಂಡ ಆಡಿದ 73 ಪಂದ್ಯಗಳ ಪೈಕಿ 41ರಲ್ಲಿ ಗೆಲುವು ಸಾಧಿಸಿದೆ. (ಸೂಪರ್ ಓವರ್ ಜಯ ಪರಿಗಣಿಸಲಾಗಿಲ್ಲ). ರೋಹಿತ್ ಶರ್ಮ ಸಾರಥ್ಯದಲ್ಲಿ ಭಾರತ ತಂಡ 55 ಪಂದ್ಯಗಳಲ್ಲಿ 42ರಲ್ಲಿ ಜಯ ಸಾಧಿಸಿದೆ. ವಿರಾಟ್ ಕೊಹ್ಲಿ ಸಾರಥ್ಯದಲ್ಲಿ ಭಾರತ ತಂಡ 50 ಪಂದ್ಯಗಳ ಪೈಕಿ 30ರಲ್ಲಿ ಗೆಲುವು ಕಂಡಿದೆ.

banner

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಬಾಬರ್ ಅಜಮ್ 81 ಪಂದ್ಯಗಳ ಪೈಕಿ 46ರಲ್ಲಿ ಜಯ ಸಾಧಿಸಿ ಮೊದಲ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ನ ಇಯಾನ್ ಮಾರ್ಗನ್ ಮತ್ತು ಆಫ್ಘಾನಿಸ್ತಾನದ ಅಸ್ಗರ್ ಅಫ್ಜನ್ ತಲಾ 42 ಪಂದ್ಯಗಳ ಗೆಲುವಿನ ದಾಖಲೆ ಹೊಂದಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ವಾಹನ ಸವಾರರಿಗೆ ಬಿಗ್ ಶಾಕ್: ವಾಹನ ಮಾರಿದ 14 ದಿನದಲ್ಲಿ ದಾಖಲೆ ವರ್ಗಾವಣೆ ಕಡ್ಡಾಯ! ಹುಚ್ಚು ಹುಚ್ಚಾಗಿ ಮಾತನಾಡೋ ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್ ಗೆ ದೂರು: ರೇಣುಕಾಚಾರ್ಯ ಫಿನಾಲೆ ಹೊಸ್ತಿಲಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಧನರಾಜ್! ಚಂದ್ರಬಾಬು ನಾಯ್ಡು ಪುತ್ರ ಲೋಕೇಶ್ ಆಂಧ್ರ ಡಿಸಿಎಂ? ಡೊನಾಲ್ಡ್ ಟ್ರಂಪ್ ಪದಗ್ರಹಣಕ್ಕೆ ಪ್ರತಿಭಟನೆ ಬಿಸಿ: ಬೀದಿಗಿಳಿದ ಸಾವಿರಾರು ಅಮೆರಿಕನ್ನರು ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ: ವೈದ್ಯ ನೆರವು ಪಡೆಯಲು ಜಗಜೀತ್ ಒಪ್ಪಿಗೆ ಸದ್ದಿಲ್ಲದೇ ದಾಂಪತ್ಯಕ್ಕೆ ಕಾಲಿರಿಸಿದ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ: ಮೊದಲ ಫೋಟೊ ಬಿಡುಗಡೆ ಕೇಂದ್ರ ಆದಿವಾಸಿ ಜನಜಾತಿ ನ್ಯಾಯ ಅಭಿಯಾನಕ್ಕೆ ಮಂಡ್ಯದ ಪೂವನಹಳ್ಳಿ ಆಯ್ಕೆ: ಎಚ್.ಡಿ. ಕುಮಾರಸ್ವಾಮಿ ಘೋಷಣೆ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಅಪಘಾತದಲ್ಲಿ ದುರ್ಮರಣ ಮಹಾಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ: ಹಲವು ಶಿಬಿರಗಳಿಗೆ ವ್ಯಾಪಿ