Sunday, September 8, 2024
Google search engine
Homeಜಿಲ್ಲಾ ಸುದ್ದಿಶಿವಮೊಗ್ಗದಲ್ಲಿ ಭೀಕರ ಅಪಘಾತ: ಸಿಗಂದೂರು ಹೊರಟ್ಟಿದ್ದ ಮೂವರ ದುರ್ಮರಣ

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಸಿಗಂದೂರು ಹೊರಟ್ಟಿದ್ದ ಮೂವರ ದುರ್ಮರಣ

ಓವರ್ ಟೇಕ್ ಮಾಡುವ ಆತುರದಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ.

ಶಿವಮೊಗ್ಗದ ಟ್ರೀಪಾರ್ಕ್ ಬಳಿ ಸಂಭವಿಸಿದ ಅಪಘಾತದಲ್ಲಿ ಚಳ್ಳಕೆರೆಯ ಬೆಳಲಗೆರೆ ಇಮಾಮ್ ಸಾಬ್, ಸ್ವಿಫ್ಟ್ ಕಾರಿನ ಚಾಲಕ ಚಂದ್ರು, ಸಿದ್ದಣ್ಣ ಮೃತಪಟ್ಟಿದ್ದು, ಮೂವರು ವಿದೇಶೀಯರು ಸೇರಿ ನಾಲ್ವರು ಗಾಯಗೊಂಡಿದ್ದಾರೆ.

ಕಿಮ್ಮನೆ ರೆಸಾರ್ಟ್ ನಿಂದ ವಿದೇಶಿ ಪ್ರವಾಸಿಗರನ್ನ ಕರೆದುಕೊಂಡು ಜೋಗ ನೋಡಲು ಹೊರಟ್ಟಿದ್ದ ಇನ್ನೋವಾ ಕಾರಿಗೆ  ಓವರ್ ಟೇಕ್ ಮಾಡಿಕೊಂಡು ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ.

ಮೃತಪಟ್ಟ ಮೂವರು ಸ್ಟಿಫ್ಟ್ ಕಾರಿನಲ್ಲಿದ್ದವರು ಆಗಿದ್ದು, ಇವರು ಸಿಗಂದೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಮೂವರು ವಿದೇಶೀಯರು ಹಾಗೂ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಂಸಿ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments