Monday, September 16, 2024
Google search engine
Homeತಾಜಾ ಸುದ್ದಿಬುಲೆಟ್ ಕಾರು ತರಿಸಿಕೊಂಡ ರಾಜ್ಯಪಾಲರು: ಸಾರ್ವಜನಿಕ ಕಾರ್ಯಕ್ರಮಗಳಿಗೆ ಗೈರು!

ಬುಲೆಟ್ ಕಾರು ತರಿಸಿಕೊಂಡ ರಾಜ್ಯಪಾಲರು: ಸಾರ್ವಜನಿಕ ಕಾರ್ಯಕ್ರಮಗಳಿಗೆ ಗೈರು!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಬೆಚ್ಚಿರುವ ರಾಜ್ಯಪಾಲರು ತಮ್ಮ ರಕ್ಷಣೆಗೆ ಬುಲೆಟ್ ಪ್ರೂಫ್ ಕಾರು ತರಿಸಿಕೊಂಡಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ನೀಡಲಾಗಿದ್ದ ಬುಲೆಟ್ ಪ್ರೂಫ್ ಕಾರನ್ನು ತಿರಸ್ಕರಿಸಿದ್ದರು. ಆದರೆ ಇದೀಗ ರಾಜ್ಯದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಇನ್ನೋವಾ ಕಾರನ್ನು ತ್ಯಜಿಸಿ ಬುಲೆಟ್ ಪ್ರೂಫ್ ಕಾರನ್ನು ತರಿಸಿಕೊಂಡಿದ್ದಾರೆ.

ಇದೇ ವೇಳೆ ರಾಜ್ಯಪಾಲರು ಬುಧವಾರ ನಡೆದ ಬೆಂಗಳೂರು ವಿವಿ ಘಟಿಕೋತ್ಸವ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಮೂಲಕ ಸಾರ್ವಜನಿಕ ಕಾರ್ಯಕ್ರಮಗಳಿಂದಲೂ ದೂರ ಉಳಿದಿದ್ದಾರೆ.

ಮೂಲಗಳ ಪ್ರಕಾರ ಮುಂದಿನ 10 ದಿನಗಳ ಕಾಲ ಅಂದರೆ ಆಗಸ್ಟ್ 25ರವರೆಗೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದೇ ಇರಲು ರಾಜ್ಯಪಾಲರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments