Thursday, September 19, 2024
Google search engine
Homeತಾಜಾ ಸುದ್ದಿಕಾವೇರಿ ನೀರು ಹಂಚಿಕೆ ಬಿಕ್ಕಟ್ಟು: ಜು. 14ರಂದು ಸರ್ವಪಕ್ಷ ಸಭೆ ಕರೆದ ರಾಜ್ಯ ಸರ್ಕಾರ

ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು: ಜು. 14ರಂದು ಸರ್ವಪಕ್ಷ ಸಭೆ ಕರೆದ ರಾಜ್ಯ ಸರ್ಕಾರ

ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಜುಲೈ 14 ರಂದು ಸರ್ವಪಕ್ಷ ಸಭೆ ಕರೆದಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮಾಹಿತಿ ನೀಡಿದರು.

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈವರೆಗೆ ಶೇ.28ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಗಮನಕ್ಕೆತರಲಾಗುವುದು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ CWRC ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದರು.

ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದರು.

ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎoಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅoತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments