Thursday, September 19, 2024
Google search engine
Homeಜಿಲ್ಲಾ ಸುದ್ದಿಮರಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ದುರ್ಮರಣ

ಮರಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ದುರ್ಮರಣ

ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ಸಂಭವಿಸಿದೆ.

ಬಂಗಾರಪೇಟೆ ಮುಖ್ಯರಸ್ತೆಯ ಸಹಕಾರ ನಗರದಲ್ಲಿ ಶನಿವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಒಬ್ಬ ಸ್ನೇಹಿತ ಸಣ್ಣಪುಟ್ಟ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಶ್ಚಲ್ ಮೃತಪಟ್ಟ ದುರ್ದೈವಿಗಳು.

ಬಂಗಾರಪೇಟೆಯ ಸಾಯಿ ಗಗನ್ ಘಟನೆಯಲ್ಲಿ ಪಾರಾಗಿದ್ದಾನೆ. ವಿದ್ಯಾರ್ಥಿಗಳು ಸಾಯಿ ಗಗನ್ ಮನೆಗೆ ಬಂದಿದ್ದರು. ಅಲ್ಲಿಂದ ವಾಪಸ್ ಕೋಲಾರಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments